Home Churches About
 

೧ ಥೆಸಲೊನೀಕದವರಿಗೆ

Chapter 1

1. ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊ ನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
2. ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಜ್ಞಾಪಕ ಮಾಡಿ ಕೊಂಡು ನಾವು ಯಾವಾಗಲೂ ನಿಮ್ಮೆಲ್ಲರ ವಿಷಯವಾಗಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
3. ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
4. ಪ್ರಿಯ ಸಹೋದರರೇ, ದೇವರು ನಿಮ್ಮನ್ನು ಆದುಕೊಂಡಿ ದ್ದಾನೆಂಬದ್ದನ್ನು ಬಲ್ಲೆವು.
5. ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
6. ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
7. ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ;
8. ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
9. ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.
10. ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.

Chapter 2

1. ಸಹೋದರರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬದನ್ನು ನೀವೇ ತಿಳಿದಿದ್ದೀರಿ.
2. ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
3. ಯಾಕಂದರೆ ನಮ್ಮ ಬೋಧನೆಯು ಮೋಸ ವಲ್ಲ, ಅಶುದ್ಧವಲ್ಲ, ವಂಚನೆಯಲ್ಲ;
4. ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
5. ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
6. ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.
7. ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
8. ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು.
9. ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
10. ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
11. ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
12. ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
13. ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
14. ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
15. ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
16. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
17. ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.
18. ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.
19. ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?
20. ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.

Chapter 3

1. ಆದದರಿಂದ ಇನ್ನು ತಡೆಯಲಾರದೆ ನಾವು ಅಥೇನೆಯಲ್ಲಿ ಒಬ್ಬಂಟಿಗರಾಗಿಯೇ ಇರುವದು ಒಳ್ಳೇದೆಂದು ಯೋಚಿಸಿದೆವು;
2. ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
3. ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
4. ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.
5. ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
6. ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
7. ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.
8. ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ,
9. ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?
10. ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.
11. ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.
12. ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.
13. ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.

Chapter 4

1. ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
2. ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ.
3. ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು.
4. ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರತೆಯಿಂದಲೂ ಘನತೆ ಯಿಂದಲೂ ತನ್ನ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು.
5. ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು.
6. ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
7. ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
8. ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
9. ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
10. ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
11. ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.
12. ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
13. ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
14. ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
15. ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ.
16. ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
17. ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.
18. ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.

Chapter 5

1. ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ.
2. ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
3. ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
4. ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
5. ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
6. ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
7. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ.
8. ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
9. ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.
10. ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
11. ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
12. ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.
13. ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.
14. ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
15. ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
16. ಯಾವಾಗಲೂ ಸಂತೋಷಿಸಿರಿ;
17. ಎಡೆಬಿಡದೆ ಪ್ರಾರ್ಥನೆ ಮಾಡಿರಿ.
18. ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
19. ಆತ್ಮನನ್ನು ನಂದಿಸಬೇಡಿರಿ; 20ಪ್ರವಾದನೆಗಳನ್ನು ಹೀನೈಸಬೇಡಿರಿ;
20. ಪ್ರವಾದನೆಗಳನ್ನು ಹೀನೈಸಬೇಡಿರಿ;
21. ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
22. ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
23. ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
24. ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
25. ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
26. ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.
27. ಈ ಪತ್ರಿಕೆಯನ್ನು ಪರಿಶುದ್ಧ ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಿಂದ ಆಜ್ಞಾಪಿಸುತ್ತೇನೆ.
28. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.


Free counters!   Site Meter(April28th2012)