Home Churches About
 

Chapter 1

1. ಮೋಶೆಯು ಎಲ್ಲಾ ಇಸ್ರಾಯೇಲ್ಯರಿಗೆ ಯೊರ್ದನಿನ ಈಚೆಯಲ್ಲಿರುವ ಅರಣ್ಯ ದಲ್ಲಿ, ಕೆಂಪು ಸಮುದ್ರಕ್ಕೆ ಎದುರಾಗಿರುವ ಬೈಲಿನಲ್ಲಿ, ಪಾರಾನ್‌, ತೋಫೆಲ್‌, ಲಾಬಾನ್‌, ಹಚೇರೋತ್‌, ದೀಜಾಹಾಬ್‌ ಎಂಬವುಗಳ ಮಧ್ಯದಲ್ಲಿ ಹೇಳಿದ ಮಾತುಗಳು ಇವೇ.
2. (ಹೋರೇಬಿನಿಂದ ಕಾದೇಶ್‌ ಬರ್ನೇಯಕ್ಕೆ ಸೇಯಾರ್‌ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).
3. ನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು.
4. ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು.
5. ಮೋಶೆಯು ಯೊರ್ದ ನಿನ ಈಚೆಯಲ್ಲಿ ಮೋವಾಬಿನ ದೇಶದಲ್ಲಿ ಈ ನ್ಯಾಯ ಪ್ರಮಾಣವನ್ನು ವಿವರಿಸುವದಕ್ಕೆ ಆರಂಭ ಮಾಡಿ
6. ನಮ್ಮ ದೇವರಾದ ಕರ್ತನು ಹೋರೇಬಿನಲ್ಲಿ ನಮಗೆ--ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು;
7. ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್‌ ಎಂಬ ಮಹಾನದಿಯ ಬಳಿಗೂ ಹೋಗಿರಿ.
8. ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.
9. ಆ ಕಾಲದಲ್ಲಿ ನಾನು ನಿಮ್ಮೊಂದಿಗೆ ಮಾತನಾಡಿ-- ನಾನೊಬ್ಬನೇ ನಿಮ್ಮನ್ನು ಹೊರಲಾರೆನಂದೆನು.
10. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಹೆಚ್ಚಿಸಿದ್ದಾನೆ. ಇಗೋ, ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.
11. ನೀವು ಈಗ ಇರುವದಕ್ಕಿಂತಲೂ ನಿಮ್ಮನ್ನು ಸಾವಿರದಷ್ಟು ಹೆಚ್ಚು ಮಾಡಿ ನಿಮಗೆ ಪ್ರಮಾಣ ಮಾಡಿದ ಹಾಗೆ ನಿಮ್ಮ ಪಿತೃಗಳ ದೇವರಾದ ಕರ್ತನು ಆಶೀರ್ವದಿಸಲಿ.
12. ನಿಮ್ಮ ಚಿಂತೆಯನ್ನೂ ಭಾರವನ್ನೂ ವ್ಯಾಜ್ಯವನ್ನೂ ನಾನೊಬ್ಬನೇ ಹೇಗೆ ಹೊರಲಿ?
13. ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು.
14. ಅದಕ್ಕೆ ನೀವು ನನಗೆ ಉತ್ತರ ಕೊಟ್ಟು ಹೇಳಿದ್ದೇನಂದರೆ--ನಿನ್ನ ಆಲೋ ಚನೆಯಂತೆ ಮಾಡುವದು ನಮಗೆ ಒಳ್ಳೇದು ಅಂದಾಗ
15. ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ
16. ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ.
17. ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
18. ಆ ಸಮಯದಲ್ಲಿ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ನಿಮಗೆ ಆಜ್ಞಾಪಿಸಿದೆನು.
19. ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.
20. ಆಗ ನಾನು ನಿಮಗೆ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ಅಮೋರಿಯರ ಬೆಟ್ಟಕ್ಕೆ ಬಂದಿರಿ;
21. ಇಗೋ, ನಿನ್ನ ದೇವರಾದ ಕರ್ತನು ದೇಶವನ್ನು ನಿನ್ನ ಮುಂದೆ ಇಟ್ಟಿದ್ದಾನೆ; ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ಹೋಗಿ ಅದನ್ನು ಸ್ವಾಧೀನಪಡಿಸಿಕೋ; ಭಯಪಡಬೇಡ, ಧೈರ್ಯಗೆಡಬೇಡ ಅಂದೆನು.
22. ಆಗ ನೀವೆಲ್ಲರೂ ನನ್ನ ಬಳಿಗೆ ಬಂದು--ನಮ್ಮ ಮುಂದಾಗಿ ಮನುಷ್ಯರನ್ನು ಕಳುಹಿಸೋಣ, ಅವರು ನಮಗೆ ಆ ದೇಶವನ್ನು ಪರಿಶೀಲಿಸಿ ನೋಡಿ ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತಿಳಿಸಲಿ ಅಂದಿರಿ.
23. ಆ ಮಾತು ನನಗೆ ಒಳ್ಳೇದೆಂದು ತೋಚಿತು; ನಾನು ನಿಮ್ಮಲ್ಲಿ ಕುಲಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿ ಯನ್ನು ತಕ್ಕೊಂಡೆನು.
24. ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ
25. ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತಕ್ಕೊಂಡು ನಮ್ಮ ಬಳಿಗೆ ತಂದು ನಮಗೆ ಸಮಾಚಾರ ವನ್ನು ತಿಳಿಸಿ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶವು ಒಳ್ಳೇದು ಎಂದು ಹೇಳಿದಿರಿ.
26. ಆದರೆ ನೀವು ಮೇಲೆ ಹೋಗುವದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ತಿರುಗಿಬಿದ್ದು
27. ನಿಮ್ಮ ಗುಡಾರಗಳಲ್ಲಿ ಗುಣುಗುಟ್ಟಿ--ಕರ್ತನು ನಮ್ಮನ್ನು ಹಗೆಮಾಡಿದ್ದರಿಂದ ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡುವದಕ್ಕೆ ಐಗುಪ್ತದೇಶದೊಳ ಗಿಂದ ಹೊರಗೆ ಬರಮಾಡಿದ್ದಾನೆ.
28. ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
29. ಆಗ ನಾನು ನಿಮಗೆ--ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ.
30. ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು.
31. ಈ ಅರಣ್ಯದಲ್ಲಿ ನಿಮ್ಮ ದೇವ ರಾದ ಕರ್ತನು, ನಿಮ್ಮನ್ನು ತಂದೆ ಮಗನನ್ನು ಹೊತ್ತು ಕೊಳ್ಳುವ ಪ್ರಕಾರ ನೀವು ಹೋದ ಮಾರ್ಗದಲ್ಲೆಲ್ಲಾ ಈ ಸ್ಥಳಕ್ಕೆ ಬರುವ ಪರ್ಯಂತರ ಹೊತ್ತುಕೊಂಡನೆಂದು ನೋಡಿದ್ದೀರಲ್ಲಾ ಅಂದೆನು.
32. ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಕರ್ತನನ್ನು ನಂಬಲಿಲ್ಲ.
33. ಇಳುಕೊಳ್ಳುವದಕ್ಕೆ ನಿಮಗೆ ಸ್ಥಳವನ್ನು ವಿಚಾರಿಸಲೂ ನೀವು ಹೋಗತಕ್ಕ ಮಾರ್ಗ ವನ್ನು ನಿಮಗೆ ತೋರಿಸಲೂ ರಾತ್ರಿಹೊತ್ತು ಬೆಂಕಿ ಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ಆತನೇ ನಿಮ್ಮ ಮುಂದೆ ಹೋದನು.
34. ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ--
35. ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ.
36. ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು.
37. ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ.
38. ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗನಾದ ಯೆಹೋಶುವನೇ ಅದರಲ್ಲಿ ಪ್ರವೇಶಿ ಸುವನು; ಅವನಿಗೆ ಧೈರ್ಯಕೊಡು; ಅವನೇ ಅದನ್ನು ಇಸ್ರಾಯೇಲಿಗೆ ಸ್ವಾಸ್ತ್ಯವಾಗಿ ಕೊಡುವನು.
39. ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.
40. ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟುಹೋಗಿರಿ ಎಂದು ಹೇಳಿದನು.
41. ನೀವು ಉತ್ತರ ಕೊಟ್ಟು ನನಗೆ--ಕರ್ತನಿಗೆ ಪಾಪ ಮಾಡಿದ್ದೇವೆ; ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ನಾವು ಹೋಗಿ ಯುದ್ಧ ಮಾಡುತ್ತೇವೆ ಅಂದಿರಿ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ತೆಗೆದುಕೊಂಡ ಮೇಲೆ ಬೆಟ್ಟಕ್ಕೆ ಹೋಗುವದು ಸಣ್ಣಕೆಲಸವೆಂದು ನೆನಸಿದಿರಿ.
42. ಆದರೆ ಕರ್ತನು ನನಗೆ--ಹೋಗಬೇಡಿರಿ; ಯುದ್ಧಮಾಡ ಬೇಡಿರಿ; ಯಾಕಂದರೆ ನಾನು ನಿಮ್ಮ ಮಧ್ಯದಲ್ಲಿ ಇರುವದಿಲ್ಲ; ನೀವು ನಿಮ್ಮ ಶತ್ರುಗಳಿಂದ ಹೊಡೆಯ ಲ್ಪಡುವಿರಿ ಎಂದು ಅವರಿಗೆ ಹೇಳು ಅಂದನು.
43. ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ ಕರ್ತನ ಅಪ್ಪಣೆಗೆ ತಿರುಗಿಬಿದ್ದು ವ್ಯರ್ಥ ಧೈರ್ಯಮಾಡಿ ಬೆಟ್ಟವನ್ನೇರಿದಿರಿ.
44. ಆಗ ಆ ಬೆಟ್ಟ ದಲ್ಲಿ ವಾಸಮಾಡುವ ಅಮೋರಿಯರು ನಿಮ್ಮೆದುರಿಗೆ ಹೊರಟು ಜೇನು ಹುಳಗಳು ಮುತ್ತಿಕೊಂಡಂತೆ ನಿಮ್ಮ ಬೆನ್ನುಹತ್ತಿ ಸೇಯಾರಿನಲ್ಲಿ ಹೊರ್ಮದ ಪರ್ಯಂತರ ನಿಮ್ಮನ್ನು ಸಂಹಾರಮಾಡಿದರು.
45. ಆಗ ನೀವು ತಿರುಗಿಕೊಂಡು ಕರ್ತನ ಮುಂದೆ ಗೋಳಾಡಿದಿರಿ; ಆದರೆ ಕರ್ತನು ನಿಮ್ಮ ಧ್ವನಿಯನ್ನು ಕೇಳಲಿಲ್ಲ, ನಿಮಗೆ ಕಿವಿಗೊಡಲಿಲ್ಲ.
46. ಆ ಮೇಲೆ ನೀವು ಕಾದೇಶಿನಲ್ಲಿ ವಾಸವಾಗಿದ್ದ ಕಾಲದ ಪ್ರಕಾರ ಬಹಳ ದಿವಸ ವಾಸವಾಗಿದ್ದಿರಿ.

Chapter 2

1. ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್‌ ಬೆಟ್ಟವನ್ನು ಸುತ್ತಿಕೊಂಡೆವು.
2. ಆ ಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--
3. ನೀವು ಈ ಬೆಟ್ಟವನ್ನು ಸುತ್ತಿಕೊಂಡದ್ದು ಸಾಕು, ಉತ್ತರಕ್ಕೆ ತಿರುಗಿ ಕೊಳ್ಳಿರಿ.
4. ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
5. ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್‌ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
6. ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು.
7. ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.
8. ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್‌, ಎಚ್ಯೋನ್ಗೆಬೆರ್‌ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.
9. ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್‌ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
10. ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ದೊಡ್ಡವ ರಾಗಿಯೂ ಬಹಳವಾದವರಾಗಿಯೂ ಉದ್ದವಾದವ ರಾಗಿಯೂ ಇರುವ ಜನರು.
11. ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
12. ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.
13. ಈಗ ಎದ್ದು ಜೆರೆದ್‌ ಹಳ್ಳವನ್ನು ದಾಟಿರಿ ಅಂದಮೇಲೆ ನಾವು ಜೆರೆದ್‌ ಹಳ್ಳವನ್ನು ದಾಟಿದೆವು.
14. ನಾವು ಕಾದೇಶ್‌ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್‌ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.
15. ಅವರು ಮುಗಿದುಹೋಗುವ ವರೆಗೆ ಅವರನ್ನು ಸೈನ್ಯದೊಳ ಗಿಂದ ನಿರ್ಮೂಲ ಮಾಡುವದಕ್ಕೆ ಕರ್ತನ ಹಸ್ತವು ಅವರ ಮೇಲಿತ್ತು.
16. ಜನರೊಳಗಿಂದ ಸೈನಿಕರೆಲ್ಲರೂ ಸತ್ತುಹೋದ ನಂತರ
17. ಕರ್ತನು ನನಗೆ--ಇಂದು ನೀನು ಮೋವಾಬಿನ ಮೇರೆಯಾದ ಆರ್‌ ಅನ್ನು ದಾಟಬೇಕು;
18. ಅಮ್ಮೋನನ ಮಕ್ಕಳೆದುರಿಗೆ ನೀನು ಬಂದರೆ ಅವರಿಗೆ ಉಪದ್ರ ಕೊಡಬೇಡ; ಅವರ ಸಂಗಡ ಜಗಳವಾಡ ಬೇಡ;
19. ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.
20. (ಇದು ಸಹ ರಾಕ್ಷಸರ ದೇಶವೆನಿಸಿಕೊಂಡಿತು; ಪೂರ್ವದಲ್ಲಿ ರಾಕ್ಷಸರು ಅದರಲ್ಲಿ ವಾಸಮಾಡಿದರು; ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು.
21. ಅವರು ಅನಾಕ್ಯರ ಹಾಗೆ ದೊಡ್ಡವರೂ ಬಹಳವಾದ ವರೂ ಉದ್ದವಾದವರೂ ಆಗಿರುವ ಜನರು; ಆದರೆ ಕರ್ತನು ಅವರನ್ನು ಇವರ ಮುಂದೆ ನಾಶಮಾಡಿದ್ದರಿಂದ ಇವರು ಅವರನ್ನು ಹೊರಡಿಸಿ ಅವರ ಬದಲಾಗಿ ವಾಸಿಸಿದರು.
22. ಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ.
23. ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.)
24. ಏಳಿರಿ, ಹೊರಡಿರಿ; ಅರ್ನೋನ್‌ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.
25. ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.
26. ಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ--
27. ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ.
28. ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;
29. ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್‌ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.
30. ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
31. ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು.
32. ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು.
33. ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು;
34. ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ.
35. ಪಶುಗಳನ್ನು ಮಾತ್ರ ನಮಗೆ ಸುಲುಕೊಂಡು ಪಟ್ಟಣಗಳನ್ನು ಕೊಳ್ಳೆ ಹೊಡೆದೆವು.
36. ಅರ್ನೋನಿನ ತೀರದಲ್ಲಿರುವ ಅರೋ ಯೇರ್‌ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.
37. ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್‌ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.

Chapter 3

1. ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು.
2. ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು.
3. ಈ ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು; ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು.
4. ಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು; ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ. ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು; ಇವೇ ಬಾಷಾನಿನಲ್ಲಿ ಓಗನ ರಾಜ್ಯವು.
5. ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು.
6. ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು.
7. ಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು.
8. ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್‌ ನದಿಯಿಂದ ಹೆರ್ಮೋನ್‌ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.
9. (ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)
10. ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,
11. ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
12. ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್‌ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್‌ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
13. ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು.
14. ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್‌ ಯಾಯಾ ರೆಂದು ಹೆಸರಿಟ್ಟನು.
15. ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು.
16. ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್‌ ಮೊದಲುಗೊಂಡು ಅರ್ನೋನ್‌ ನದಿಯ ವರೆಗೆ ಕೊಟ್ಟೆನು.
17. ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್‌ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್‌ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
18. ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್‌ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.
19. ನಿಮ್ಮ ಹೆಂಡತಿ ಯರೂ ಮಕ್ಕಳೂ ಪಶುಗಳೂ (ನಿಮಗೆ ಬಹಳ ಪಶುಗಳಿವೆ ಎಂದು ನನಗೆ ತಿಳಿದಿದೆ)
20. ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.
21. ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾ ಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣು ಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳಿಗೆ ಕರ್ತನು ಹಾಗೆಯೇ ಮಾಡುವನು.
22. ನೀವು ಅವುಗಳಿಗೆ ಭಯಪಡಬೇಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ತಾನೇ ನಿಮಗೋಸ್ಕರ ಯುದ್ಧಮಾಡುತ್ತಾನೆ ಎಂಬದು.
23. ಆ ಕಾಲದಲ್ಲಿ ನಾನು ಕರ್ತನಿಗೆ ಮಾಡಿದ ಬಿನ್ನಹ ವೇನಂದರೆ--
24. ನನ್ನ ದೇವರಾದ ಕರ್ತನೇ, ನೀನು ನಿನ್ನ ಸೇವಕನಿಗೆ ನಿನ್ನ ಮಹಿಮೆಯನ್ನೂ ನಿನ್ನ ಕೈಯ ಶಕ್ತಿಯನ್ನೂ ತೋರಿಸುವದಕ್ಕೆ ಆರಂಭಮಾಡಿದಿ; ನಿನ್ನ ಕೃತ್ಯಗಳ ಹಾಗೆಯೂ ನಿನ್ನ ಪರಾಕ್ರಮದ ಹಾಗೆಯೂ ಮಾಡಲು ಶಕ್ತನಾದ ದೇವರು ಪರಲೋಕದಲ್ಲಾಗಲಿ ಭೂಮಿಯಲ್ಲಾಗಲಿ ಯಾರಿದ್ದಾರೆ? ನಾನು ದಾಟಿ ಹೋಗಿ
25. ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ.
26. ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.
27. ಪಿಸ್ಗಾದ ತುದಿಗೆ ಏರಿ ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಕಣ್ಣುಗಳನ್ನೆತ್ತಿ ಅದನ್ನು ಕಣ್ಣಾರೆ ನೋಡು; ಆದರೆ ಈ ಯೊರ್ದನನ್ನು ನೀನು ದಾಟಿಹೋಗುವದಿಲ್ಲ.
28. ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.
29. ಆಗ ನಾವು ಬೇತ್‌ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.

Chapter 4

1. ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
2. ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.
3. ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?
4. ಆದರೆ ನಿಮ್ಮ ದೇವರಾದ ಕರ್ತನಿಗೆ ಅಂಟಿಕೊಂಡವರಾದ ನೀವೆಲ್ಲರು ಇಂದು ಬದುಕುತ್ತೀರಿ.
5. ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.
6. ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
7. ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು?
8. ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
9. ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
10. ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
11. ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು.
12. ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.
13. ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು.
14. ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು.
15. ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.
16. ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ
17. ಭೂಮಿಯ ಮೇಲಿರುವ ಯಾವದೊಂದು ಮೃಗದ ಹೋಲಿಕೆಯನ್ನೂ ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವದೊಂದು ಪಕ್ಷಿಯ ಹೋಲಿಕೆ ಯನ್ನೂ ಭೂಮಿಯ ಮೇಲೆ ಹರಿದಾಡುವಂಥ ಯಾವ ದೊಂದರ ಹೋಲಿಕೆಯನ್ನೂ
18. ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವದೊಂದು ವಿಾನಿನ ಹೋಲಿಕೆ ಯನ್ನೂ ಮಾಡದ ಹಾಗೆಯೂ
19. ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.
20. ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
21. ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.
22. ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.
23. ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.
24. ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
25. ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ
26. ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
27. ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
28. ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.
29. ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
30. ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
31. ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
32. ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ?
33. ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ ?
34. ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
35. ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ.
36. ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.
37. ಆತನು ನಿನ್ನ ಪಿತೃಗಳನ್ನು ಪ್ರೀತಿಮಾಡಿದ್ದರಿಂದ ಅವರ ತರುವಾಯ ಅವರ ಸಂತತಿಯನ್ನು ಆದು ಕೊಂಡು ನಿನ್ನನ್ನು ತನ್ನ ದೃಷ್ಟಿಯಲ್ಲಿ ತನ್ನ ಮಹಾ ಬಲ ದೊಂದಿಗೆ ಐಗುಪ್ತದೊಳಗಿಂದ ಹೊರಗೆ ಬರಮಾಡಿ ದನು.
38. ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ಈ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು.
39. ಹೀಗಿರುವ ದರಿಂದ ಮೇಲಿನ ಆಕಾಶದಲ್ಲಿಯೂ ಕೆಳಗಿನ ಭೂಮಿ ಯಲ್ಲಿಯೂ ಕರ್ತನೇ ದೇವರೆಂದು ಮತ್ತೊಬ್ಬನಿಲ್ಲ ವೆಂದು ಈಹೊತ್ತು ತಿಳುಕೊಂಡು ಮನಸ್ಸಿಗೆ ತಂದು ಕೋ.
40. ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
41. ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು.
42. ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು.
43. ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್‌, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್‌, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್‌.
44. ಮೋಶೆಯು ಇಸ್ರಾಯೇಲ್‌ ಮಕ್ಕಳ ಮುಂದೆ ಇಟ್ಟ ನ್ಯಾಯಪ್ರಮಾಣವು ಇದೇ--
45. ಇಸ್ರಾಯೇಲ್‌ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
46. ಯೊರ್ದನಿನ ಈಚೆಯಲ್ಲಿ ಬೇತ್‌ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್‌ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.
47. ಅವನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಈಚೆಯಲ್ಲಿ ಸೂರ್ಯೋದಯದ ಕಡೆಗೆ ಇರುವ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ
48. ಅರ್ನೋನ್‌ ನದಿಯ ತೀರದಲ್ಲಿರುವ ಅರೋ ಯೇರ್‌ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್‌ ಪರ್ವತದ ವರೆಗೆ
49. ಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.

Chapter 5

1. ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
2. ನಮ್ಮ ದೇವರಾದ ಕರ್ತನು ಹೋರೇ ಬಿನಲ್ಲಿ ನಮ್ಮ ಸಂಗಡ ಆ ಒಡಂಬಡಿಕೆಯನ್ನು ಮಾಡಿದನು.
3. ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ.
4. ಮುಖಾಮುಖಿಯಾಗಿ ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದನು.
5. (ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ--
6. ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ.
7. ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
8. ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು,
9. ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.
10. ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ.
11. ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ.
12. ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್‌ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು.
13. ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.
14. ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್‌ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.
15. ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್‌ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
16. ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
17. ಕೊಲ್ಲಬೇಡ
18. ವ್ಯಭಿಚಾರ ಮಾಡಬೇಡ.
19. ಕದಿಯಬೇಡ.
20. ನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ.
21. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.
22. ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.
23. (ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ)
24. ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.
25. ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ.
26. ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?
27. ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.
28. ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು.
29. ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
30. ನೀನು ಹೋಗಿ ಅವರಿಗೆ--ನಿಮ್ಮ ಡೇರೆಗಳಿಗೆ ತಿರುಗಿಕೊಳ್ಳಬೇಕು ಎಂದು ಹೇಳು.
31. ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
32. ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.
33. ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.

Chapter 6

1. ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
2. ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.
3. ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
4. ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.
5. ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
6. ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.
7. ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
8. ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು.
9. ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.
10. ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
11. ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ
12. ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
13. ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
14. ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.
15. (ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
16. ನೀವು ಮಸ್ಸದಲ್ಲಿ ಶೋಧಿಸಿದ ಹಾಗೆ ನಿಮ್ಮ ದೇವರಾದ ಕರ್ತನನ್ನು ಶೋಧಿಸಬೇಡಿರಿ.
17. ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ಆತನ ಸಾಕ್ಷಿಗಳನ್ನೂ ಆತನ ನಿಯಮ ಗಳನ್ನೂ ಎಚ್ಚರಿಕೆಯಿಂದ ಕೈಕೊಳ್ಳಬೇಕು.
18. ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು
19. ಕರ್ತನು ಹೇಳಿದ ಪ್ರಕಾರ ನಿನ್ನ ಎಲ್ಲಾ ಶತ್ರುಗಳನ್ನು ನಿನ್ನ ಮುಂದೆ ತಳ್ಳಿಹಾಕುವ ಹಾಗೆಯೂ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನೂ ಒಳ್ಳೇದನ್ನೂ ಮಾಡಬೇಕು.
20. ಮುಂದಿನ ಕಾಲದಲ್ಲಿ ನಿನ್ನ ಮಗನು--ನಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಸಾಕ್ಷಿ ನಿಯಮ ನ್ಯಾಯಗಳು ಏನೆಂದು ನಿನ್ನನ್ನು ಕೇಳಿದರೆ ನಿನ್ನ ಮಗ ನಿಗೆ--
21. ನಾವು ಐಗುಪ್ತದಲ್ಲಿ ಫರೋಹನಿಗೆ ದಾಸ ರಾಗಿದ್ದೆವು; ಕರ್ತನು ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದನು.
22. ಕರ್ತನು ನಮ್ಮ ಕಣ್ಣುಗಳ ಮುಂದೆ ಐಗುಪ್ತದಲ್ಲಿ ಫರೋಹನ ಮೇಲೆಯೂ ಅವನ ಎಲ್ಲಾ ಮನೆಯವರ ಮೇಲೆಯೂ ಬಹು ಕಠಿಣವಾದ ಬಾಧೆಗಳಿಂದ ಅದ್ಭುತ ಗಳನ್ನೂ ಸೂಚನೆಗಳನ್ನೂ ತೋರಿಸಿದನು.
23. ಆತನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಮಗೆ ಕೊಟ್ಟು ನಾವು ಅದರಲ್ಲಿ ಪ್ರವೇಶಮಾಡುವ ಹಾಗೆ ಅಲ್ಲಿಂದ ನಮ್ಮನ್ನು ಹೊರಗೆ ಬರಮಾಡಿದನು.
24. ನಮಗೆ ಎಂದೆಂದಿಗೂ ಒಳ್ಳೇದಾಗುವ ಹಾಗೆಯೂ ಈ ದಿನದಂತೆ ನಾವು ಬದುಕುವ ಹಾಗೆಯೂ ನಾವು ಈ ನಿಯಮಗಳನ್ನೆಲ್ಲಾ ಕೈಕೊಂಡು ನಮ್ಮ ದೇವರಾದ ಕರ್ತನಿಗೆ ಭಯಪಡಬೇಕೆಂದು ಕರ್ತನು ನಮಗೆ ಆಜ್ಞಾಪಿಸಿದ್ದಾನೆ.
25. ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.

Chapter 7

1. ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
2. ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
3. ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.
4. ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
5. ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
6. ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
7. ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
8. ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.
9. ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
10. ತನ್ನನ್ನು ಹಗೆ ಮಾಡುವವರಿಗೆ ಮುಖಾಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸಿ ಅವರನ್ನು ನಾಶಮಾಡುತ್ತಾನೆ; ಆತನು ತನ್ನನ್ನು ಹಗೆಮಾಡುವವರಿಗೆ ತಡಮಾಡದೆ ಮುಖಾ ಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ ಎಂದು ತಿಳಿದುಕೋ.
11. ಹೀಗಿರುವದರಿಂದ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆ ನಿಯಮ ನ್ಯಾಯಗಳನ್ನು ಕೈಕೊಳ್ಳಬೇಕು.
12. ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದು ಕೊಂಡರೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗ ಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನೂ ಕರುಣೆ ಯನ್ನೂ ನಿನಗೋಸ್ಕರ ನೆರವೇರಿಸುವನು.
13. ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು.
14. ಎಲ್ಲಾ ಜನಗಳಿಗಿಂತಲೂ ನೀನು ಆಶೀರ್ವದಿಸಲ್ಪಟ್ಟವನಾ ಗಿರುವಿ; ನಿಮ್ಮೊಳಗೆ ಸ್ತ್ರೀಯರಲ್ಲಾಗಲಿ ಪುರುಷರ ಲ್ಲಾಗಲಿ ಪಶುಗಳಲ್ಲಾಗಲಿ ಬಂಜೆತನವು ಇರುವದಿಲ್ಲ.
15. ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು.
16. ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
17. ಈ ಜನಾಂಗಗಳು ನನಗಿಂತ ಹೆಚ್ಚಾದವರಾ ಗಿದ್ದಾರೆ, ನಾನು ಹೇಗೆ ಅವರನ್ನು ವಶಮಾಡಿಕೊಳ್ಳಲಿ ಎಂದು ನಿನ್ನ ಹೃದಯದಲ್ಲಿ ಅಂದುಕೊಂಡು
18. ನೀನು ಅವರಿಗೆ ಭಯಪಡಬೇಡ; ನಿನ್ನ ದೇವರಾದ ಕರ್ತನು ಫರೋಹನಿಗೂ ಎಲ್ಲಾ ಐಗುಪ್ತಕ್ಕೂ ಮಾಡಿದ್ದನು
19. ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು.
20. ಇದಲ್ಲದೆ ಉಳಿದವರೂ ನಿನಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿನ್ನ ದೇವ ರಾದ ಕರ್ತನು ಕಡಜದ ಹುಳವನ್ನು ಅವರಲ್ಲಿ ಕಳುಹಿ ಸುವನು.
21. ಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ.
22. ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು.
23. ಆದರೂ ನಿನ್ನ ದೇವರಾದ ಕರ್ತನು ಅವುಗಳನ್ನು ನಿನಗೆ ಒಪ್ಪಿಸಿಬಿಡುವನು; ಅವರು ನಾಶವಾಗುವ ತನಕ ಅತ್ಯಧಿಕವಾಗಿ ಅವರನ್ನು ಸಂಹರಿಸುವನು.
24. ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.
25. ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.
26. ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.

Chapter 8

1. ನೀವು ಬದುಕಿ ಅಭಿವೃದ್ಧಿಯಾಗಿ ಕರ್ತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಹೋಗಿ ಅದನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಕೊಳ್ಳಬೇಕು.
2. ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
3. ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.
4. ಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ.
5. ಇದಲ್ಲದೆ ಒಬ್ಬನು ತನ್ನ ಮಗ ನನ್ನು ಶಿಕ್ಷಿಸುವ ಪ್ರಕಾರ ನಿನ್ನ ದೇವರಾದ ಕರ್ತನು ನಿನ್ನನ್ನು ಶಿಕ್ಷಿಸುತ್ತಾನೆಂದು ನಿನ್ನ ಹೃದಯದಲ್ಲಿ ತಿಳು ಕೊಳ್ಳಬೇಕು.
6. ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಂಡು ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನಿಗೆ ಭಯಪಡಬೇಕು.
7. ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.
8. ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ.
9. ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.
10. ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
11. ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
12. ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ
13. ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂ
14. ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
15. ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
16. ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
17. ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
18. ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
19. ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.
20. ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.

Chapter 9

1. ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ
2. ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ.
3. ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.
4. ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
5. ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
6. ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ.
7. ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.
8. ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು.
9. ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
10. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.
11. ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.
12. ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು.
13. ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ.
14. ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.
15. ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.
16. ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ.
17. ಆಗ ನಾನು ಆ ಎರಡು ಹಲಗೆಗಳನ್ನು ತಕ್ಕೊಂಡು ನನ್ನ ಎರಡು ಕೈಗಳಿಂದ ಬಿಸಾಡಿ ನಿಮ್ಮ ಕಣ್ಣು ಮುಂದೆ ಒಡೆದು ಹಾಕಿದೆನು.
18. ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
19. ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು.
20. ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು.
21. ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
22. ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್‌ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
23. ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
24. ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.
25. ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.
26. ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
27. ನಿನ್ನ ದಾಸರಾದ ಅಬ್ರಹಾಮ್‌ ಇಸಾಕ್‌ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.
28. ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.
29. ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.

Chapter 10

1. ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು.
2. ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು; ಆ ಮೇಲೆ ನೀನು ಅವುಗಳನ್ನು ಮಂಜೂ ಷದಲ್ಲಿ ಇಡಬೇಕು ಎಂದು ಹೇಳಿದನು.
3. ಈ ಪ್ರಕಾರ ನಾನು ಶಿಟ್ಟೀಮ್‌ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು.
4. ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.
5. ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.
6. ಇದಲ್ಲದೆ ಇಸ್ರಾಯೇಲ್‌ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
7. ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.
8. ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
9. ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.
10. ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ.
11. ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು.
12. ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
13. ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?
14. ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
15. ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.
16. ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
17. ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
18. ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
19. ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.
20. ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
21. ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು.
22. ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.

Chapter 11

1. ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು.
2. ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನಂದರೆ --ನಿಮ್ಮ ದೇವರಾದ ಕರ್ತನು ಮಾಡಿದ ಶಿಕ್ಷೆಯನ್ನೂ ಆತನ ಮಹತ್ವವನ್ನೂ ಆತನ ಬಲವಾದ ಕೈಯನ್ನೂ ಆತನು ಚಾಚಿದತೋಳನ್ನೂ
3. ಆತನು ಐಗುಪ್ತದ ಮಧ್ಯದಲ್ಲಿ ಐಗುಪ್ತದ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಆತನ ಸೂಚಕಕಾರ್ಯಗಳನ್ನೂ ಕೃತ್ಯಗ ಳನ್ನೂ
4. ಐಗುಪ್ತದ ಸೈನ್ಯಕ್ಕೆ ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನೂ ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪು ಸಮುದ್ರದ ನೀರು ಅವರ ಮೇಲೆ ಬರಮಾಡಿದ್ದನ್ನೂ ಕರ್ತನು ಇಂದಿನ ವರೆಗೆ ಅವರನ್ನು ನಾಶಮಾಡಿದ್ದನ್ನೂ
5. ನೀವು ಈ ಸ್ಥಳಕ್ಕೆ ಬರುವ ವರೆಗೆ ಕರ್ತನು ಅರಣ್ಯದಲ್ಲಿ ನಿಮಗೆ ಮಾಡಿದ್ದನ್ನೂ
6. ಆತನು ರೂಬೇನನ ಮಗನಾದ ಎಲಿಯಾಬನ ಕುಮಾರರಾಗಿರುವ ದಾತಾನನಿಗೂ ಅಬೀರಾಮನಿಗೂ ಮಾಡಿದ್ದನ್ನೂ ಭೂಮಿಯು ತನ್ನ ಬಾಯನ್ನು ತೆರೆದು ಅವರ ಮನೆಗಳನ್ನೂ ಡೇರೆಗಳನ್ನೂ ಮೇರೆಗಳನ್ನೂ ಅವರಿಗಿದ್ದ ಎಲ್ಲಾ ಆಸ್ತಿಯನ್ನೂ ಸಮಸ್ತ ಇಸ್ರಾಯೇಲ್‌ ಮಧ್ಯದಲ್ಲಿ ಹೇಗೆ ನುಂಗಿತೆಂಬದನ್ನೂ ನೋಡದೆ ತಿಳಿಯದೆ ಇರುವ ನಿಮ್ಮ ಮಕ್ಕಳ ಸಂಗಡ ನಾನು ಮಾತನಾಡುವದಿಲ್ಲ.
7. ಆದರೆ ನಿಮ್ಮ ಕಣ್ಣು ಗಳು ಕರ್ತನು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನೋಡಿದವು.
8. ಹೀಗಿರುವದರಿಂದ ನೀವು ಬಲವುಳ್ಳವರಾಗಿಯೂ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶ ದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವ ಹಾಗೆಯೂ
9. ಕರ್ತನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗುವ ಹಾಗೆಯೂ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಯನ್ನೆಲ್ಲಾ ಕೈಕೊಳ್ಳಬೇಕು.
10. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ.
11. ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ;
12. ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
13. ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
14. ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
15. ನಿನ್ನ ಪಶುಗಳಿಗೆ ಹುಲ್ಲನ್ನು ನಿನ್ನ ಹೊಲದಲ್ಲಿ ಕೊಡುವೆನು; ನೀನು ತಿಂದು ತೃಪ್ತಿಯಾಗುವಿ.
16. ನಿಮ್ಮ ಹೃದಯವು ಮರುಳುಗೊಳ್ಳದ ಹಾಗೆಯೂ ನೀವು ಓರೆಯಾಗಿ ಹೋಗಿ ಬೇರೆ ದೇವರುಗಳನ್ನು ಸೇವಿಸಿ ಅಡ್ಡಬೀಳದ ಹಾಗೆಯೂ
17. ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.
18. ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.
19. ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
20. ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಅವು ಗಳನ್ನು ಬರೆಯಬೇಕು.
21. ಹೀಗಾದರೆ ನಿಮ್ಮ ದಿವಸ ಗಳೂ ನಿಮ್ಮ ಮಕ್ಕಳ ದಿವಸಗಳೂ ಭೂಮಿಯಲ್ಲಿ ಆಕಾಶದ ದಿವಸಗಳ ಪ್ರಕಾರ ಕರ್ತನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಹೆಚ್ಚುವವು.
22. ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ
23. ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ.
24. ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್‌ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
25. ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.
26. ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.
27. ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು.
28. ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.
29. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್‌ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್‌ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.
30. ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ?
31. ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಯೊರ್ದನನ್ನು ದಾಟಿಹೋಗಬೇಕು; ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡು ವಿರಿ.
32. ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.

Chapter 12

1. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿನ್ನ ಪಿತೃಗಳ ದೇವರಾದ ಕರ್ತನು ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ಬದುಕುವ ದಿವಸಗಳಲ್ಲೆಲ್ಲಾ ಲಕ್ಷಿಸಿ ಮಾಡತಕ್ಕ ನಿಯಮ ನ್ಯಾಯಗಳು ಇವೇ.
2. ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.
3. ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.
4. ನೀವು ನಿಮ್ಮ ಕರ್ತನಾದ ದೇವರಿಗೆ ಹಾಗೆ ಮಾಡ ಬೇಡಿರಿ.
5. ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
6. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
7. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
8. ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ.
9. ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ;
10. ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ
11. ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
12. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
13. ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ;
14. ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
15. ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.
16. ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.
17. ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.
18. ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
19. ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.
20. ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು;
21. ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ಕರ್ತನು ನಿನಗೆ ಕೊಟ್ಟ ಪಶು ಕುರಿಗಳನ್ನು ನಾನು ನಿನಗೆ ಆಜ್ಞಾಪಿಸಿದಂತೆ ಕೊಯ್ದು ನಿನ್ನ ಬಾಗಲುಗಳಲ್ಲಿ ನಿನಗೆ ಮನಸ್ಸಿದ್ದಷ್ಟು ಉಣ್ಣಬಹುದು.
22. ಆದರೆ ಜಿಂಕೆ ಕಡವೆಗಳನ್ನು ಉಣ್ಣುವ ಹಾಗೆ ಅದನ್ನು ಉಣ್ಣಬೇಕು. ಶುದ್ಧನೂ ಅಶುದ್ಧನೂ ಕೂಡ ಅದೇ ರೀತಿಯಲ್ಲಿ ಅದನ್ನು ತಿನ್ನಲಿ.
23. ರಕ್ತವನ್ನು ಮಾತ್ರ ತಿನ್ನದ ಹಾಗೆ ಜಾಗ್ರತೆ ಯಾಗಿರು; ಯಾಕಂದರೆ ರಕ್ತವು ಪ್ರಾಣವೇ, ಮತ್ತು ಪ್ರಾಣವನ್ನು ಮಾಂಸದ ಸಂಗಡ ತಿನ್ನಬೇಡ.
24. ಅದನ್ನು ತಿನ್ನದೆ ನೀರಿನಂತೆ ಭೂಮಿಯ ಮೇಲೆ ಹೊಯ್ಯಬೇಕು.
25. ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡುವದರಿಂದ ನಿನಗೂ ನಿನ್ನ ಮುಂದಿರುವ ಮಕ್ಕಳಿಗೂ ಒಳ್ಳೇದಾಗುವ ಹಾಗೆ ಅದನ್ನು ತಿನ್ನಬೇಡ.
26. ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.
27. ಆಗ ನಿನ್ನ ದಹನ ಬಲಿಗಳನ್ನೂ ಮಾಂಸವನ್ನೂ ರಕ್ತವನ್ನೂ ನಿನ್ನ ದೇವ ರಾದ ಕರ್ತನ ಬಲಿಪೀಠದ ಮೇಲೆ ಅರ್ಪಿಸಬೇಕು; ಆದರೆ ನಿನ್ನ ಬಲಿಗಳ ರಕ್ತವನ್ನು ನಿನ್ನ ದೇವರಾದ ಕರ್ತನ ಬಲಿಪೀಠದ ಮೇಲೆ ಹೊಯ್ಯಬೇಕು; ಅವುಗಳ ಮಾಂಸವನ್ನು ತಿನ್ನಬೇಕು.
28. ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.
29. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ನಿನ್ನ ಮುಂದೆ ಕಡಿದು ಬಿಡುವಾಗ, ನೀನು ಅವುಗಳನ್ನು ಜಯಿಸಿ ಅವುಗಳ ದೇಶದಲ್ಲಿ ವಾಸಮಾಡುವಾಗ
30. ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ.
31. ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.
32. ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.

Chapter 13

1. ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ
2. ನೀನು ತಿಳಿಯದ ಬೇರೆ ದೇವರುಗಳನ್ನು ಅನುಸರಿಸಿ--ಅವರಿಗೆ ನಾವು ಸೇವೆಮಾಡೋಣ ಎಂದು ಹೇಳಿ ಅವನು ನಿನಗೆ ಹೇಳಿದ ಸೂಚನೆಯೂ ಅದ್ಭುತವೂ ಸಂಭವಿಸಿದರೆ
3. ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.
4. ನಿಮ್ಮ ದೇವರಾದ ಕರ್ತನನ್ನೇ ಅನುಸರಿಸಿ ಆತನಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಂಡು ಆತನ ಸ್ವರವನ್ನು ಕೇಳಿ ಆತನಿಗೆ ಸೇವೆಮಾಡಿ ಆತನಿಗೆ ಅಂಟಿಕೊಳ್ಳಬೇಕು.
5. ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.
6. ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
7. ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ
8. ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.
9. ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು.
10. ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು.
11. ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.
12. ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ
13. ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ
14. ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,
15. ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು.
16. ಇದಲ್ಲದೆ ಅದರ ಎಲ್ಲಾ ಕೊಳ್ಳೆಯನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ ಆ ಪಟ್ಟಣವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ಸಂಪೂರ್ಣವಾಗಿ ನಿನ್ನ ದೇವರಾದ ಕರ್ತನಿಗೆ ಬೆಂಕಿಯಿಂದ ಸುಟ್ಟುಬಿಡಬೇಕು; ಅದು ಎಂದೆಂದಿಗೂ ದಿಬ್ಬವಾಗಬೇಕು; ತರುವಾಯ ಅದನ್ನು ಕಟ್ಟಬಾರದು.
17. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿ
18. ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.

Chapter 14

1. ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.
2. ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.
3. ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ:
4. ಎತ್ತು, ಕುರಿ, ಮೇಕೆ,
5. ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ ಕೊಂಡಗುರಿ.
6. ಮೃಗಜಾತಿಯಲ್ಲಿ ಗೊರ ಸೆಯು ಭೇದಿಸಿರುವ ಆ ಭೇದವನ್ನು ಎರಡು ಗೊರಸೆ ಗಳಾಗಿ ವಿಭಾಗಿಸಿದ್ದು ಮೆಲುಕು ಹಾಕುವಂಥ ಮೃಗಗಳ ನ್ನೆಲ್ಲಾ ನೀವು ತಿನ್ನಬಹುದು.
7. ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ.
8. ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.
9. ನೀರಿನಲ್ಲಿರುವ ಎಲ್ಲವುಗಳಲ್ಲಿ ನೀವು ಇವುಗಳನ್ನು ತಿನ್ನಬಹುದು: ರೆಕ್ಕೆಗಳೂ ಪೊರೆಗಳೂ ಉಳ್ಳವುಗ ಳನ್ನೆಲ್ಲಾ ತಿನ್ನಬಹುದು.
10. ಆದರೆ ರೆಕ್ಕೆಗಳೂ ಪೊರೆ ಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು; ಅವು ನಿಮಗೆ ಅಶುದ್ಧವಾಗಿವೆ.
11. ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು.
12. ಪಕ್ಷಿ ಜಾತಿಯಲ್ಲಿ ನೀವು ತಿನ್ನಬಾರದವುಗಳು ಯಾವ ವೆಂದರೆ: ಗರುಡ, ಬೆಟ್ಟದಹದ್ದು, ಕ್ರೌಂಚ, ಗಿಡಗ, ಹಕ್ಕಿಸಾಲೆ,
13. ಗಿಡಗವೂ ಬೈರಿಯೂ ಜಾತ್ಯಾನುಸಾರ ವಾದ ರಣಹದ್ದು
14. ಜಾತ್ಯಾನುಸಾರವಾದ ಸಕಲ ಕಾಗೆಯೂ
15. ಉಷ್ಟ್ರಪಕ್ಷಿಯೂ ಗೂಬೆಯೂ ಕಡಲ್ಕಾ ಗೆಯೂ ಜಾತ್ಯಾನುಸಾರವಾದ ಡೇಗೆಯೂ
16. ಚಿಕ್ಕ ಗೂಬೆಯೂ ದೊಡ್ಡಗೂಬೆಯೂ ಕೊಕ್ಕರೆಯೂ
17. ನೀರು ಕೋಳಿಯೂ ಹೆಣಹದ್ದೂ ಬೆಳ್ವಕ್ಕಿಯೂ
18. ನೀರು ಕೊಕ್ಕರೆಯೂ ಜಾತ್ಯಾನುಸಾರವಾದ ಬಕವೂ ಬುಡ್ಡಗೋಳಿಯೂ ರಾತ್ರಿಗೀಜಕವೂ.
19. ಇದಲ್ಲದೆ ಹಾರುವ ಎಲ್ಲಾ ಹುಳಗಳು ನಿಮಗೆ ಅಶುದ್ಧವೇ, ಅವುಗಳನ್ನು ತಿನ್ನಬಾರದು.
20. ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು.
21. ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.
22. ನೀನು ಬಿತ್ತುವದರಿಂದ ಹೊಲದಲ್ಲಿ ವರುಷ ವರುಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು.
23. ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು.
24. ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆ
25. ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು.
26. ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
27. ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
28. ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.
29. ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.

Chapter 15

1. ಪ್ರತಿ ಏಳು ವರುಷಗಳ ಅಂತ್ಯದಲ್ಲಿ ಬಿಡುಗಡೆಯನ್ನು ಮಾಡಬೇಕು.
2. ಬಿಡು ಗಡೆಯ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡ ಬೇಕು; ಅದು ಕರ್ತನ ಬಿಡುಗಡೆ ಎಂದು ಕರೆಯಲ್ಪಟ್ಟ ಕಾರಣ ತನ್ನ ನೆರೆಯವನಿಂದಲೂ ತನ್ನ ಸಹೋದರ ನಿಂದಲೂ ಸಾಲ ತೆಗೆದುಕೊಳ್ಳಬಾರದು.
3. ಅನ್ಯನಿಂದ ತಿರಿಗಿ ತೆಗೆದುಕೊಳ್ಳಬಹುದು; ಆದರೆ ನಿನ್ನ ಸಹೋದರನ ಬಳಿಯಲ್ಲಿ ನಿನಗಿರುವದನ್ನು ನೀನು ಬಿಟ್ಟುಬಿಡಬೇಕು.
4. ಬಡತನವು ನಿನ್ನ ಮಧ್ಯದಲ್ಲಿರದ ಹಾಗೆ; ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಪಡಿಸಿಕೊಳ್ಳು ವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಕರ್ತನು ನಿನ್ನನ್ನು ಬಹಳವಾಗಿ ಆಶೀರ್ವದಿಸುವನು.
5. ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆದರೆ
6. ನಿಶ್ಚಯವಾಗಿ ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನಮಾಡಿದಂತೆ ನಿನ್ನನ್ನು ಆಶೀರ್ವದಿಸುವನು; ನೀನು ಸಾಲ ತೆಗೆದು ಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲಕೊಡುವಿ. ಅನೇಕ ಜನಾಂಗಗಳನ್ನು ಆಳುವಿ, ಅವರು ನಿನ್ನನ್ನು ಆಳುವದಿಲ್ಲ.
7. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.
8. ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು.
9. ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.
10. ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.
11. ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
12. ನಿನ್ನ ಸಹೋದರನಾದ ಇಬ್ರಿಯನಾಗಲಿ ಒಬ್ಬ ಇಬ್ರಿಯ ಸ್ತ್ರೀಯಾಗಲಿ ನಿನಗೆ ಮಾರಲ್ಪಟ್ಟು ಆರು ವರುಷ ನಿನಗೆ ಸೇವೆಮಾಡಿದ್ದರೆ ಏಳನೇ ವರುಷದಲ್ಲಿ ಅವನನ್ನು ಬಿಡುಗಡೆಮಾಡಿ ಕಳುಹಿಸಬೇಕು.
13. ಅವ ನನ್ನು ಬಿಡುಗಡೆಮಾಡಿ ನಿನ್ನಿಂದ ಕಳುಹಿಸುವಾಗ ಬರೀ ಕೈಯಾಗಿ ಕಳುಹಿಸಿಬಿಡಬೇಡ.
14. ನಿನ್ನ ಕುರಿಮಂದೆ ಯಿಂದಲೂ ಕಣದಿಂದಲೂ ಆಲೆಯಿಂದಲೂ ಅವನಿಗೆ ಧಾರಾಳವಾಗಿ ಕೊಡಬೇಕು; ನಿನ್ನ ದೇವರಾದ ಕರ್ತನು ನಿನಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅವನಿಗೆ ಕೊಡಬೇಕು.
15. ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.
16. ಇದಲ್ಲದೆ ಅವನು ನಿನ್ನನ್ನೂ ನಿನ್ನ ಮನೆಯನ್ನೂ ಪ್ರೀತಿಮಾಡುವದರಿಂದಲೂ ನಿನ್ನ ಬಳಿಯಲ್ಲಿ ಸುಖ ವಾಗಿರುವದರಿಂದಲೂ--ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲವೆಂದು ಹೇಳಿದರೆ
17. ನೀನು ದಬ್ಬಳ ವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿನ್ನ ದಾಸನಾಗಿರುವನು; ನಿನ್ನ ದಾಸಿಗೂ ಹಾಗೆಯೇ ಮಾಡಬೇಕು.
18. ಅವನನ್ನು ನಿನ್ನಿಂದ ಬಿಡುಗಡೆಯಾಗಿ ಕಳುಹಿಸು ವದು ನಿನಗೆ ಕಠಿಣವೆಂದು ಕಾಣಿಸಬಾರದು; ಅವನು ಆರು ವರುಷ ನಿನ್ನ ದಾಸನಾಗಿದ್ದರಿಂದ ಸಂಬಳದ ಸೇವಕನಿಗಿಂತ ಎರಡರಷ್ಟಾಗಿದ್ದನು; ಹೀಗೆ ನೀನು ಮಾಡುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
19. ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು.
20. ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.
21. ಆದರೆ ಅದರಲ್ಲಿ ಯಾವುದಕ್ಕಾದರೂ ಊನತೆ ಇದ್ದರೆ ಅದು ಕುಂಟಾಗಲಿ ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾದರೆ
22. ಅದನ್ನು ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು. ಕಡವೆ ಜಿಂಕೆಗಳನ್ನು ತಿನ್ನುವ ಹಾಗೆ ಶುದ್ಧರೂ ಅಶುದ್ಧರೂ ಅದನ್ನು ನಿನ್ನ ಬಾಗಲು ಗಳಲ್ಲಿ ತಿನ್ನಬೇಕು.
23. ಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.

Chapter 16

1. ಆಬೀಬ್‌ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್‌ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
2. ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.
3. ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
4. ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು.
5. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು.
6. ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.
7. ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;
8. ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
9. ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.
10. ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.
11. ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
12. ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು.
13. ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು.
14. ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
15. ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.
16. ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
17. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನು ತನ್ನ ಕೈಯಿಂದ ಆಗುವಷ್ಟು ಕೊಡಬೇಕು.
18. ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
19. ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
20. ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.
21. ನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು.
22. ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.

Chapter 17

1. ಊನತೆ ಯಾವದೊಂದು ಅವಲಕ್ಷಣ ಇರುವ ಹೋರಿಯನ್ನಾಗಲಿ ಕುರಿಯ ನ್ನಾಗಲಿ ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.
2. ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು
3. ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ
4. ಅದು ನಿನಗೆ ತಿಳಿಯಬಂದದರಿಂದ ನೀನು ಕೇಳಿ ಚೆನ್ನಾಗಿ ವಿಚಾರಿಸಿದ ಮೇಲೆ ಇಗೋ, ಈ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ ಈ ಅಸಹ್ಯ ಕಾರ್ಯವು ಇಸ್ರಾಯೇಲಿನಲ್ಲಿ ನಡೆದದ್ದಾದರೆ
5. ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.
6. ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು.
7. ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
8. ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
9. ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
10. ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು.
11. ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು.
12. ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;
13. ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ.
14. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ
15. ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.
16. ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
17. ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು.
18. ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು.
19. ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂ
20. ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.

Chapter 18

1. ಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು.
2. ಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ.
3. ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.
4. ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆ ಗಳ ಪ್ರಥಮ ಫಲವನ್ನೂ ನಿನ್ನ ಕುರಿಗಳ ಉಣ್ಣೆ ಯಲ್ಲಿ ಪ್ರಥಮವಾದದ್ದನ್ನೂ ಅವನಿಗೆ ಕೊಡಬೇಕು.
5. ಅವನೂ ಅವನ ಕುಮಾರರೂ ನಿತ್ಯವಾಗಿ ಕರ್ತನ ಹೆಸರಿನಲ್ಲಿ ಸೇವಿಸುತ್ತಾ ನಿಂತಿರುವ ಹಾಗೆ ಅವನನ್ನು ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡಿದ್ದಾನೆ.
6. ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ
7. ಅಲ್ಲಿ ಕರ್ತನ ಮುಂದೆ ನಿಂತು ಕೊಳ್ಳುವ ಅವನ ಸಹೋದರರಾದ ಲೇವಿಯರ ಹಾಗೆ ಅವನು ತನ್ನ ದೇವರಾದ ಕರ್ತನ ಹೆಸರಿ ನಲ್ಲಿ ಸೇವೆಮಾಡಬಹುದು.
8. ಅವರು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದಲ್ಲದೆ ಸಮವಾದ ಭಾಗಗಳನ್ನು ತಿನ್ನಬೇಕು.
9. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
10. ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
11. ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
12. ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
13. ನೀನು ನಿನ್ನ ದೇವರಾದ ಕರ್ತನೊಂದಿಗೆ ಸಂಪೂರ್ಣನಾಗಿರಬೇಕು.
14. ನೀನು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ.
15. ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
16. ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
17. ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ.
18. ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
19. ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
20. ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.
21. ಇದಲ್ಲದೆ ಕರ್ತನು ಹೇಳಿದ ವಾಕ್ಯವು ನಮಗೆ ಹೇಗೆ ತಿಳಿದೀತೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ
22. ಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.

Chapter 19

1. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ
2. ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ಕೊಡುವ ನಿನ್ನ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.
3. ನರಹತ್ಯೆ ಮಾಡುವವ ರೆಲ್ಲರೂ ಅಲ್ಲಿಗೆ ಓಡಿಹೋಗುವ ಹಾಗೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇರೆ ಯನ್ನು ಮೂರು ಭಾಗಮಾಡಿ ನಿನಗಾಗಿ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.
4. ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ.
5. ಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಆ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ,
6. ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.
7. ಆದಕಾರಣ ನಾನು ನಿನಗೆ ಆಜ್ಞಾಪಿಸು ವದೇನಂದರೆ--ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.
8. ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ
9. ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನ ಮೇರೆಯನ್ನು ವಿಸ್ತಾರಮಾಡಿ ನಿನ್ನ ಪಿತೃಗಳಿಗೆ ಕೊಡುತ್ತೇನೆಂದು ಹೇಳಿದ ದೇಶವನ್ನೆಲ್ಲಾ ನಿನಗೆ ಕೊಟ್ಟರೆ
10. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
11. ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ
12. ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು.
13. ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
14. ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
15. ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
16. ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ
17. ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.
18. ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ
19. ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
20. ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ.
21. ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.

Chapter 20

1. ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ.
2. ನೀವು ಯುದ್ಧಕ್ಕೆ ಸವಿಾಪ ಬಂದಾಗ ಯಾಜಕನು ಹತ್ತಿರ ಬಂದು ಜನರ ಸಂಗಡ ಮಾತನಾಡಿ ಅವ ರಿಗೆ--
3. ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ ;
4. ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.
5. ಆಗ ಅಧಿಕಾರಿಗಳು ಜನಕ್ಕೆ--ಹೊಸ ಮನೆಯನ್ನು ಕಟ್ಟಿ ಗೃಹಪ್ರತಿಷ್ಠೆಮಾಡದ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಗೃಹಪ್ರತಿಷ್ಠೆಮಾಡದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ.
6. ದ್ರಾಕ್ಷೇತೋಟವನ್ನು ನೆಟ್ಟು ಅದರ ಫಲ ವನ್ನು ತಿನ್ನದೆ ಇರುವ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅದರ ಫಲ ತಿನ್ನದಹಾಗೆ ಅವನು ಸಹ ತಿರುಗಿಕೊಂಡು ತನ್ನ ಮನೆಗೆ ಹೋಗಲಿ.
7. ಹೆಂಡತಿ ಯನ್ನು ನಿಶ್ಚಯಿಸಿಕೊಂಡು ಆಕೆಯನ್ನು ಮದುವೆ ಮಾಡಿಕೊಳ್ಳದ ಮನುಷ್ಯನು ಹಿಂತಿರುಗಿ ಮನೆಗೆ ಹೋಗಲಿ ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು.
8. ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.
9. ಅಧಿಕಾರಿ ಗಳು ಜನರ ಸಂಗಡ ಮಾತನಾಡಿ ಮುಗಿಸಿದಾಗ ಜನರ ಮುಂದೆ ನಡೆಯತಕ್ಕ ಸೈನ್ಯಾಧಿಪತಿಗಳನ್ನು ನೇಮಿಸಬೇಕು.
10. ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು.
11. ಆ ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು.
12. ಅದು ನಿನ್ನ ಸಂಗಡ ಸಮಾಧಾನವಾಗಲೊಲ್ಲದೆ ನಿನ್ನ ಸಂಗಡ ಯುದ್ಧಮಾಡಿದರೆ ಅದಕ್ಕೆ ಮುತ್ತಿಗೆ ಹಾಕಬೇಕು.
13. ನಿನ್ನ ದೇವರಾದ ಕರ್ತನು ಅದನ್ನು ನಿನ್ನ ಕೈಗೆ ಕೊಟ್ಟರೆ ಅದರ ಗಂಡಸರೆಲ್ಲರನ್ನು ಕತ್ತಿಯಿಂದ ಹೊಡೆಯಬೇಕು.
14. ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.
15. ಹೀಗೆ ಇಲ್ಲಿರುವ ಈ ಜನಾಂಗಗಳ ಪಟ್ಟಣಗಳಲ್ಲದಂಥ, ನಿನಗೆ ದೂರವಾಗಿರುವಂಥ ಪಟ್ಟಣಗಳಿಗೆಲ್ಲಾ ಹಾಗೇ ಮಾಡ ಬೇಕು.
16. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು.
17. ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ
18. ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.
19. ನೀನು ಒಂದು ಪಟ್ಟಣಕ್ಕೆ ವಿರೋಧವಾಗಿ ಯುದ್ಧ ಮಾಡಿ ಅದನ್ನು ಹಿಡಿಯುವಹಾಗೆ ಬಹಳದಿವಸ ಮುತ್ತಿಗೆ ಹಾಕಿದರೆ ಮರಗಳನ್ನು ಕೊಡಲಿತಾಗಿಸಿ ಕೆಡಿಸಬೇಡ. ಯಾಕಂದರೆ ಅವುಗಳ ಹಣ್ಣನ್ನು ನೀನು ತಿನ್ನಬಹುದು. ಅವುಗಳನ್ನು ಮುತ್ತಿಗೆಯಲ್ಲಿ ನಿನಗೆ ಸಹಾಯವಾಗುವದ ಕ್ಕೋಸ್ಕರ ಕಡಿದುಹಾಕಬಾರದು. ಹೊಲದ ಮರಗಳು ಮನುಷ್ಯರ ಜೀವಕ್ಕಾಗಿವೆ.
20. ಆಹಾರಕ್ಕಾಗದ ಮರ ಗಳೆಂದು ನಿನಗೆ ತಿಳಿದಿರುವ ಮರಗಳನ್ನು ಮಾತ್ರ ಕೆಡಿಸಿ ಕಡಿದುಹಾಕಿ ನಿನ್ನ ಸಂಗಡ ಯುದ್ಧಮಾಡುವ ಪಟ್ಟಣಕ್ಕೆ ವಿರೋಧವಾಗಿ ಅದು ಬೀಳುವ ತನಕ ಮುತ್ತಿಗೆ ಹಾಕಬಹುದು.

Chapter 21

1. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ
2. ನಿನ್ನ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ ಆ ಹತವಾದವನ ಸುತ್ತಲಿರುವ ಪಟ್ಟಣಗಳ ವರೆಗೂ ಅಳತೆಮಾಡಬೇಕು.
3. ಹತನಾದವನಿಗೆ ಸವಿಾಪವಾದ ಊರು ಯಾವದೋ ಆ ಊರಿನ ಹಿರಿಯರು ಕೆಲಸ ಮಾಡದಂಥ, ನೊಗದಲ್ಲಿ ಎಳೆದಂಥ, ಒಂದು ಕಡಸನ್ನು ತಮಗೆ ತಕ್ಕೊಳ್ಳಬೇಕು.
4. ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು.
5. ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
6. ಆ ಮೇಲೆ ಹತನಾದವನಿಗೆ ಸವಿಾಪವಾಗಿರುವ ಆ ಊರಿನ ಹಿರಿಯರೆಲ್ಲರು ಹಳ್ಳದಲ್ಲಿ ಕೊಯ್ದ ಮಣಕದ ಮೇಲೆ ಕೈಗಳನ್ನು ತೊಳಕೊಂಡು
7. ಉತ್ತರಕೊಟ್ಟು ಹೇಳತಕ್ಕದ್ದೇನಂದರೆ--ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ; ನಮ್ಮ ಕಣ್ಣುಗಳು ಅದನ್ನು ನೋಡಲಿಲ್ಲ.
8. ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು.
9. ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.
10. ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡಲು ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಕೈಗೆ ಒಪ್ಪಿಸುವದರಿಂದ ನೀನು ಅವರನ್ನು ಸೆರೆ ಹಿಡಿದಾಗ
11. ಆ ಸೆರೆಯವರಲ್ಲಿ ಸೌಂದರ್ಯವಾದ ಸ್ತ್ರೀಯನ್ನು ನೋಡಿ ಅವಳನ್ನು ನಿನಗೆ ಹೆಂಡತಿಯಾಗಿ ತಕ್ಕೊಳ್ಳುವಹಾಗೆ ಅವಳ ಮೇಲೆ ಅಪೇಕ್ಷೆಯನ್ನಿಟ್ಟರೆ
12. ಅವಳನ್ನು ನಿನ್ನ ಮನೆಯೊಳಗೆ ತರಬೇಕು. ಅವಳು ತಲೆ ಬೋಳಿಸಿಕೊಂಡು, ಉಗುರುಗಳನ್ನು ಕತ್ತರಿಸಿ ಕೊಂಡು,
13. ತನ್ನ ಸೆರೆಯ ವಸ್ತ್ರವನ್ನು ತೆಗೆದಿಟ್ಟು ನಿನ್ನ ಮನೆಯಲ್ಲಿ ವಾಸವಾಗಿದ್ದು, ತನ್ನ ತಂದೆತಾಯಿಗಳ ನಿಮಿತ್ತ ಪೂರ್ಣ ತಿಂಗಳು ಗೋಳಾಡಲಿ. ಆ ಮೇಲೆ ನೀನು ಅವಳ ಬಳಿಗೆ ಹೋಗಿ ಅವಳಿಗೆ ಗಂಡನಾಗ ಬಹುದು; ಅವಳು ನಿನಗೆ ಹೆಂಡತಿಯಾಗಿರುವಳು.
14. ಆದರೆ ನೀನು ಅವಳನ್ನು ಮೆಚ್ಚದೆ ಹೋದರೆ ಅವಳನ್ನು ಅವಳ ಮನಸ್ಸಿದ್ದಲ್ಲಿಗೆ ಕಳುಹಿಸಿಬಿಡಬೇಕು; ಹೇಗಾದರೂ ಹಣಕ್ಕೆ ಮಾರಲೇಬಾರದು; ನೀನು ಅವಳನ್ನು ತಗ್ಗಿಸಿದ್ದರಿಂದ ಅವಳನ್ನು ದಾಸಿಯ ಹಾಗೆ ನಡಿಸಬಾರದು.
15. ಒಬ್ಬ ಮನುಷ್ಯನಿಗೆ ಪ್ರೀತಿಮಾಡಲ್ಪಟ್ಟ ಒಬ್ಬಳೂ ಹಗೆಮಾಡಲ್ಪಟ್ಟ ಒಬ್ಬಳೂ ಇಬ್ಬರು ಪತ್ನಿಯರು ಇರ ಲಾಗಿ ಪ್ರೀತಿಮಾಡಲ್ಪಟ್ಟವಳೂ ಹಗೆಮಾಡಲ್ಪಟ್ಟವಳೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ ಹಗೆಮಾಡಲ್ಪಟ್ಟವಳ ಮಗನು ಚೊಚ್ಚಲಾಗಿದ್ದರೆ
16. ಅವನು ತನ್ನ ಕುಮಾರರಿಗೆ ತನಗೆ ಉಂಟಾದದ್ದನ್ನು ಸ್ವಾಸ್ತ್ಯವಾಗಿ ಕೊಡುವ ದಿವಸ ದಲ್ಲಿ ಚೊಚ್ಚಲಾಗಿರುವ ಹಗೆಮಾಡಲ್ಪಟ್ಟವಳ ಮಗನಿಗೆ ಬದಲಾಗಿ ಪ್ರೀತಿಮಾಡಲ್ಪಟ್ಟವಳ ಮಗನನ್ನು ಚೊಚ್ಚ ಲಾಗಿ ಮಾಡಕೂಡದು.
17. ಅವನು ಹಗೆ ಮಾಡಲ್ಪಟ್ಟ ವಳ ಮಗನಿಗೆ ತನ್ನ ಬಳಿಯಲ್ಲಿ ಉಂಟಾದ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು ಅವನೇ ಚೊಚ್ಚಲನೆಂದು ಒಪ್ಪಿಕೊಳ್ಳಬೇಕು. ಯಾಕಂದರೆ ಅವನೇ ಅವನ ಬಲದ ಆರಂಭವು; ಅವನಿಗೆ ಚೊಚ್ಚಲತನದ ಹಕ್ಕು ಉಂಟು.
18. ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ
19. ಅವನ ತಂದೆ ತಾಯಿಗಳು ಅವನನ್ನು ಹಿಡಿದು ಪಟ್ಟಣದ ಹಿರಿಯರ ಬಳಿಗೂ ಅವನ ಸ್ಥಳದ ಬಾಗಲಿನ ಬಳಿಗೂ ಹೊರಗೆ ತಂದು
20. ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು.
21. ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
22. ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆ
23. ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.

Chapter 22

1. ನಿನ್ನ ಸಹೋದರನ ಎತ್ತಾಗಲಿ ಕುರಿಯಾಗಲಿ ಮಾರ್ಗ ತಪ್ಪಿದ್ದನ್ನು ನೋಡಿ ಅವುಗಳನ್ನು ಅಲಕ್ಷ್ಯ ಮಾಡಬಾರದು; ಹೇಗಾದರೂ ಅವುಗಳನ್ನು ನಿನ್ನ ಸಹೋದರನಿಗೆ ತಿರುಗಿ ಕೊಡಬೇಕು.
2. ಆದರೆ ನಿನ್ನ ಸಹೋದರನು ನಿನಗೆ ಸವಿಾಪವಾಗಿರದೆ ಹೋದರೆ ಇಲ್ಲವೆ ಅವನ ಗುರುತು ನಿನಗೆ ತಿಳಿಯದೆ ಇದ್ದರೆ ತಪ್ಪಿ ಹೋದದ್ದನ್ನು ನಿನ್ನ ಮನೆಗೆ ಒಯ್ಯಬೇಕು; ನಿನ್ನ ಸಹೋದರನು ಅದನ್ನು ಹುಡುಕುವ ವರೆಗೆ ಅದು ನಿನ್ನ ಸಂಗಡ ಇರಬೇಕು; ತರುವಾಯ ಅದನ್ನು ಹಿಂದಕ್ಕೆ ಅವನಿಗೆ ಕೊಡಬೇಕು.
3. ಅವನ ಕತ್ತೆಗೆ ಹಾಗೆಯೇ ಮಾಡಬೇಕು; ಅವನ ವಸ್ತ್ರಕ್ಕೂ ಹಾಗೆಯೇ ಮಾಡ ಬೇಕು; ನಿನ್ನ ಸಹೋದರನು ಕಳೆದುಕೊಂಡ ಎಲ್ಲಾ ವಸ್ತುಗಳನ್ನು ನೀನು ಕಂಡುಕೊಂಡರೆ ಹಾಗೆಯೇ ಮಾಡಬೇಕು;
4. ನೀನು ಕಾಣದವನಂತೆ ಇರಬಾರದು. ನಿನ್ನ ಸಹೋದರನ ಕತ್ತೆಯಾಗಲಿ ಎತ್ತಾಗಲಿ ಮಾರ್ಗ ದಲ್ಲಿ ಬಿದ್ದಿರುವದನ್ನು ನೋಡಿದರೆ ಅಲಕ್ಷ್ಯಮಾಡ ಬೇಡ; ಹೇಗಾದರೂ ಅವುಗಳನ್ನು ಎಬ್ಬಿಸುವದಕ್ಕೆ ಅವನಿಗೆ ಖಂಡಿತಾ ಸಹಾಯಮಾಡಬೇಕು.
5. ಸ್ತ್ರೀಯು ಪುರುಷನ ಉಡಿಗೆ ಉಟ್ಟುಕೊಳ್ಳಬಾರದು; ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು; ಇವುಗಳನ್ನು ಮಾಡುವವರೆಲ್ಲಾ ಕರ್ತನಿಗೆ ಅಸಹ್ಯ.
6. ನಿನಗೆ ಮಾರ್ಗದಲ್ಲಿ ಯಾವದಾದರೊಂದು ಗಿಡದ ಲ್ಲಾಗಲಿ ನೆಲದಲ್ಲಾಗಲಿ ಮರಿಗಳುಳ್ಳ ಇಲ್ಲವೆ ಮೊಟ್ಟೆಗ ಳುಳ್ಳ ಪಕ್ಷಿಯ ಗೂಡು ಸಿಕ್ಕಿದರೆ ಮರಿಗಳ ಮೇಲೆಯಾ ಗಲಿ ಮೊಟ್ಟೆಗಳ ಮೇಲೆಯಾಗಲಿ ತಾಯಿ ಕೂತು ಕೊಂಡಿದ್ದರೆ ಮರಿಗಳ ಸಂಗಡ ತಾಯಿಯನ್ನು ತಕ್ಕೊಳ್ಳ ಬಾರದು;
7. ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದಿನಗಳು ಹೆಚ್ಚುವ ಹಾಗೆಯೂ ಹೇಗಾದರೂ ತಾಯಿ ಯನ್ನು ಕಳುಹಿಸಿಬಿಟ್ಟು ಮರಿಗಳನ್ನು ತಕ್ಕೊಳ್ಳಬೇಕು.
8. ನೀನು ಹೊಸ ಮನೆಯನ್ನು ಕಟ್ಟಿದಾಗ ಯಾವನಾ ದರೂ ಅದರ ಮೇಲಿನಿಂದ ಬೀಳುವ ಪಕ್ಷದಲ್ಲಿ ನೀನು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಗೆ ಸಣ್ಣಗೋಡೆ ಕಟ್ಟಬೇಕು.
9. ನಿನ್ನ ದ್ರಾಕ್ಷೇತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜದ ಪೈರೂ ದ್ರಾಕ್ಷೇತೋಟದ ಹುಟ್ಟುವಳಿಯೂ ಅಶುದ್ಧವಾಗು ವವು.
10. ಎತ್ತನ್ನು ಕತ್ತೆಯೊಂದಿಗೆ ಹೂಡಬೇಡ.
11. ಉಣ್ಣೆಯೂ ಸಣಬೂ ಕೂಡಿಸಿ ಮಾಡಿದ ವಸ್ತ್ರವನ್ನು ಹೊದಿಯಬಾರದು.
12. ನೀನು ಹೊದ್ದುಕೊಳ್ಳುವ ಶಲ್ಯದ ನಾಲ್ಕು ಮೂಲೆ ಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು.
13. ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳ ಬಳಿಗೆ ಬಂದ ಮೇಲೆ ಅವಳನ್ನು ಹಗೆಮಾಡಿ
14. ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟು ಅವಳ ಹೆಸರನ್ನು ಕೆಡಿಸಿ--ಈ ಹೆಂಗಸನ್ನು ನಾನು ತಕ್ಕೊಂಡು ಅವಳ ಬಳಿಗೆ ಬಂದಾಗ ಅವಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಹೇಳಿದರೆ
15. ಆ ಹುಡುಗಿಯ ತಂದೆಯೂ ತಾಯಿಯೂ ಆ ಹುಡುಗಿಯ ಕನ್ಯಾ ಭಾವದ ಲಕ್ಷಣಗಳನ್ನು ತಕ್ಕೊಂಡು, ಪಟ್ಟಣದ ಹಿರಿಯರ ಮುಂದೆ ಬಾಗಲಿನ ಬಳಿಗೆ ತರಬೇಕು.
16. ಆ ಮೇಲೆ ಹುಡುಗಿಯ ತಂದೆಯು ಹಿರಿಯರಿಗೆ ಹೇಳತಕ್ಕದ್ದೇ ನೆಂದರೆ--ನನ್ನ ಮಗಳನ್ನು ಈ ಮನುಷ್ಯನಿಗೆ ಹೆಂಡತಿ ಯಾಗಿ ಕೊಟ್ಟಿದ್ದೇನೆ; ಅವನು ಅವಳನ್ನು ಹಗೆಮಾಡಿ ದ್ದಾನೆ;
17. ಇಗೋ, ಅವನು--ನಿನ್ನ ಮಗಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಅವಳಿಗೆ ವಿರೋಧವಾದ ಕೆಟ್ಟಮಾತಿಗೆ ಆಸ್ಪದಕೊಟ್ಟಿದ್ದಾನೆ; ಆದರೂ ಇದೆ ನನ್ನ ಮಗಳ ಕನ್ಯಾಭಾವದ ಲಕ್ಷಣಗಳು. ಹೀಗೆ ಅವರು ಪಟ್ಟಣದ ಹಿರಿಯರ ಮುಂದೆ ಬಟ್ಟೆಯನ್ನು ಹಾಸಬೇಕು.
18. ಆಗ ಪಟ್ಟಣದ ಹಿರಿಯರು ಆ ಮನುಷ್ಯನನ್ನು ತೆಗೆದುಕೊಂಡು ಅವನನ್ನು ಶಿಕ್ಷಿಸಬೇಕು.
19. ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ಯಾ ಸ್ತ್ರೀಯ ಹೆಸರನ್ನು ಕೆಡಿಸಿದ್ದರಿಂದ ಅವನು ಬೆಳ್ಳಿಯ ನೂರು ಹಣಗಳನ್ನು ದಂಡ ತೆಗೆದುಕೊಂಡು ಆ ಹುಡುಗಿಯ ತಂದೆಗೆ ಕೊಡಬೇಕು; ಇದಲ್ಲದೆ ಅವಳು ಅವನಿಗೆ ಹೆಂಡತಿ ಯಾಗಬೇಕು; ಅವನು ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಬಾರದು.
20. ಈ ಮಾತು ಸತ್ಯವಾಗಿದ್ದು, ಆ ಹುಡುಗಿಯಲ್ಲಿ ಕನ್ಯಾಭಾವದ ಲಕ್ಷಣ ಕಾಣದೆ ಇದ್ದರೆ
21. ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;
22. ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.
23. ಕನ್ಯಾ ಸ್ತ್ರೀಯಾದ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯಮಾಡಿರಲಾಗಿ ಮತ್ತೊಬ್ಬ ಮನುಷ್ಯನು ಪಟ್ಟಣ ದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ
24. ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
25. ಒಬ್ಬ ಮನುಷ್ಯನು ನಿಶ್ಚಯಮಾಡಿದ ಹುಡುಗಿ ಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ ಅವಳ ಸಂಗಡ ಮಲಗಿದರೆ ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬೇಡ
26. ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ.
27. ಅವನು ಹೊಲದಲ್ಲಿ ಅವಳನ್ನು ಕಂಡನು; ನಿಶ್ಚಯಮಾಡಿದ ಆ ಹುಡುಗಿ ಕೂಗಿದಳು, ಆದರೆ ರಕ್ಷಿಸುವವನು ಅವಳಿಗೆ ಯಾರೂ ಇಲ್ಲ.
28. ಒಬ್ಬ ಮನುಷ್ಯನು ನಿಶ್ಚಯಮಾಡದಿರುವ ಕನ್ಯಾ ಸ್ತ್ರೀಯಾದ ಹುಡುಗಿಯನ್ನು ಕಂಡು ಅವಳನ್ನು ಹಿಡಿದು ಅವಳ ಸಂಗಡ ಮಲಗುವಲ್ಲಿ ಅವನು ಸಿಕ್ಕಿದರೆ
29. ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.
30. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.

Chapter 23

1. ಬೀಜದಲ್ಲಿ ಗಾಯವುಳ್ಳವನೂ ರಹಸ್ಯಾಂಗ ಕೊಯ್ಯಲ್ಪಟ್ಟವನೂ ಕರ್ತನ ಸಭೆಗೆ ಸೇರ ಬಾರದು.
2. ಜಾರಳ ಮಗನು ಕರ್ತನ ಸಭೆಗೆ ಸೇರ ಬಾರದು; ಅವನ ಹತ್ತನೇ ತಲಾಂತರದವರೆಗೂ ಕರ್ತನ ಸಭೆಗೆ ಸೇರಬಾರದು.
3. ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
4. ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
5. ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
6. ನೀನು ಇರುವ ವರೆಗೆ ಎಂದಿಗೂ ಅವರ ಸಮಾಧಾನವನ್ನೂ ಅವರ ಮೇಲನ್ನೂ ಹುಡುಕ ಬಾರದು.
7. ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.
8. ಅವರಿಗೆ ಹುಟ್ಟುವ ಮಕ್ಕಳು ಮೂರನೇ ತಲಾಂತರದಲ್ಲಿ ಕರ್ತನ ಸಭೆಯಲ್ಲಿ ಸೇರಬಹುದು.
9. ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಸೈನ್ಯ ದೊಡನೆ ಹೊರಟರೆ ದುಷ್ಟ ಕಾರ್ಯಗಳಿಗೆಲ್ಲಾ ದೂರ ವಾಗಿರುವಂತೆ ನಿನ್ನನ್ನು ಕಾಪಾಡಿಕೋ.
10. ರಾತ್ರಿಯಲ್ಲಿ ಸಂಭವಿಸಿದ ಕಾರ್ಯದ ದೆಸೆಯಿಂದ ಶುದ್ಧವಲ್ಲದ ಮನುಷ್ಯನು ನಿಮ್ಮಲ್ಲಿದ್ದರೆ ಅವನು ಪಾಳೆಯದ ಹೊರಗೆ ಹೋಗಬೇಕು; ಪಾಳೆಯದ ಒಳಗೆ ಬರಬಾರದು.
11. ಸಂಜೆ ಆಗುತ್ತಿರುವಾಗ ಅವನು ನೀರಿನಲ್ಲಿ ತೊಳ ಕೊಳ್ಳಲಿ; ಸೂರ್ಯನು ಮುಣುಗಿದಾಗ ಪಾಳೆಯದ ಒಳಗೆ ತಿರಿಗಿ ಬರಲಿ.
12. ಇದಲ್ಲದೆ ನೀನು ಹೊರಗಡೆ ಹೋಗುವದಕ್ಕೆ ನಿನಗೆ ಪಾಳೆಯದ ಹೊರಗೆ ಸ್ಥಳವಿರಬೇಕು.
13. ನಿನ್ನ ಆಯುಧದೊಂದಿಗೆ ಮೊಳೆ ಇರಬೇಕು; ನೀನು ಹೊರಗೆ ಕೂತುಕೊಂಡಾಗ ಅದರಿಂದ ಅಗಿದು ನಿನ್ನಿಂದ ಹೊರಡು ವದನ್ನು ಮುಚ್ಚಬೇಕು.
14. ನಿನ್ನ ದೇವರಾದ ಕರ್ತನು ನಿನ್ನನ್ನು ರಕ್ಷಿಸುವದಕ್ಕೂ ನಿನ್ನ ಶತ್ರುಗಳನ್ನು ನಿನ್ನ ಮುಂದೆ ಒಪ್ಪಿಸಿಬಿಡುವದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾನೆ. ಆತನು ನಿನ್ನಲ್ಲಿ ಅಶುದ್ಧವಾದ ಕಾರ್ಯ ವನ್ನು ನೋಡಿ ನಿನ್ನನ್ನು ಬಿಟ್ಟು ತಿರುಗದ ಹಾಗೆ ನಿನ್ನ ಪಾಳೆಯವು ಪರಿಶುದ್ಧವಾಗಿರಬೇಕು.
15. ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು.
16. ಅವನು ನಿನ್ನ ಸಂಗಡ ನಿನ್ನ ಮಧ್ಯ ದಲ್ಲಿ ಅವನು ಆದುಕೊಂಡಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ಅವನಿಗೆ ಒಳ್ಳೇದೆಂದು ತೋಚಿದಲ್ಲಿ ವಾಸ ವಾಗಿರಬೇಕು; ಅವನನ್ನು ಉಪದ್ರಪಡಿಸಬಾರದು.
17. ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು.
18. ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.
19. ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು.
20. ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.
21. ನೀನು ನಿನ್ನ ದೇವರಾದ ಕರ್ತನಿಗೆ ಪ್ರಮಾಣ ಮಾಡಿದ ಮೇಲೆ ಅದನ್ನು ಸಲ್ಲಿಸುವದಕ್ಕೆ ತಡಮಾಡ ಬೇಡ; ನಿನ್ನ ದೇವರಾದ ಕರ್ತನು ಅದನ್ನು ನಿಶ್ಚಯ ವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವನು; ಅದು ನಿನ್ನಲ್ಲಿ ಪಾಪವಾಗಿರುವದು.
22. ಆದರೆ ನೀನು ಪ್ರಮಾಣ ಮಾಡಿರದಿದ್ದರೆ ನಿನ್ನ ಮೇಲೆ ಪಾಪವಿರು ವದಿಲ್ಲ.
23. ನಿನ್ನ ತುಟಿಗಳಿಂದ ಹೊರಟದ್ದನ್ನು ಕಾಪಾಡಿ ನೀನು ಉಚಿತವಾಗಿ ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡಿದಂತೆ ನಿನ್ನ ಬಾಯಿಂದ ಪ್ರಮಾಣ ಮಾಡಬೇಕು.
24. ನಿನ್ನ ನೆರೆಯವನ ದ್ರಾಕ್ಷೇತೋಟಕ್ಕೆ ಬಂದರೆ ನಿನಗೆ ಮನಸ್ಸು ಬಂದ ಹಾಗೆ ತೃಪ್ತಿಯಾಗುವ ವರೆಗೆ ಹಣ್ಣುಗಳನ್ನು ತಿನ್ನಬಹುದು;
25. ಆದರೆ ನಿನ್ನ ಚೀಲದಲ್ಲಿ ಹಾಕಬಾರದು. ನಿನ್ನ ನೆರೆಯವನ ಪೈರಿಗೆ ಬಂದರೆಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲಾಡಿಸಬೇಡ.

Chapter 24

1. ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು.
2. ಅವಳು ಅವನ ಮನೆಯನ್ನು ಬಿಟ್ಟು ಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗ ಬಹುದು.
3. ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ
4. ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.
5. ಒಬ್ಬನು ಹೊಸದಾಗಿ ಹೆಂಡತಿಯನ್ನು ತಕ್ಕೊಂಡರೆ ಯುದ್ಧಕ್ಕೆ ಹೊರಡಬಾರದು; ಅವನಿಂದ ಯಾವ ದೊಂದೂ ಕೆಲಸವನ್ನು ಮಾಡಿಸಬಾರದು; ಅವನು ಒಂದು ವರುಷ ಬಿಡುಗಡೆಯಾಗಿ ತನ್ನ ಮನೆಯಲ್ಲಿದ್ದು ತಾನು ತಕ್ಕೊಂಡ ಹೆಂಡತಿಯನ್ನು ಸಂತೋಷ ಪಡಿಸಬೇಕು.
6. ಬೀಸುವ ಕಲ್ಲಿನಲ್ಲಿ ಅಡಿಕಲ್ಲಾದರೂ ಮೇಲ್ಕಲ್ಲಾ ದರೂ ಒತ್ತೆಯಾಗಿ ತಕ್ಕೊಳ್ಳಬಾರದು; ಹಾಗೆ ಮಾಡಿದರೆ ಪ್ರಾಣವನ್ನು ಒತ್ತೆಯಾಗಿ ತಕ್ಕೊಂಡ ಹಾಗಿರುವದು.
7. ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.
8. ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;
9. ನೀವು ಐಗುಪ್ತದಿಂದ ಹೊರಗೆ ಬರುವಾಗ ನಿನ್ನ ದೇವರಾದ ಕರ್ತನು ಮಿರ್ಯಾಮಳಿಗೆ ಮಾರ್ಗದಲ್ಲಿ ಮಾಡಿದ್ದನ್ನು ಜ್ಞಾಪಕಮಾಡಿಕೋ.
10. ನೀನು ನಿನ್ನ ನೆರೆಯವನಿಗೆ ಯಾವದೊಂದು ಕೈಗಡ ಕೊಟ್ಟರೆ ಅವನ ಒತ್ತೆಯನ್ನು ಕೇಳುವ ಹಾಗೆ ಅವನ ಮನೆಯಲ್ಲಿ ಪ್ರವೇಶಿಸಬಾರದು.
11. ನೀನು ಹೊರಗೆ ನಿಂತಿರಬೇಕು; ನೀನು ಕೈಗಡ ಕೊಟ್ಟ ಮನುಷ್ಯನು ಒತ್ತೆಯನ್ನು ನಿನಗೆ ಹೊರಗೆ ತರಬೇಕು.
12. ಅವನು ಬಡವನಾದರೆ, ಅವನ ಒತ್ತೆ ಇಟ್ಟುಕೊಂಡು ಮಲಗ ಬೇಡ.
13. ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.
14. ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು.
15. ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
16. ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು.
17. ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ.
18. ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ವಿಮೋಚಿಸಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
19. ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
20. ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ.
21. ನಿನ್ನ ದ್ರಾಕ್ಷೇತೋಟದಲ್ಲಿ ಕೂಡಿ ಸಿದರೆ ಮಿಕ್ಕಿದ್ದನ್ನು ಆರಿಸಬೇಡ; ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
22. ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.

Chapter 25

1. ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು.
2. ಇದಲ್ಲದೆ ಆ ದುಷ್ಟನು ಹೊಡೆಯಲ್ಪಡಲು ಯೋಗ್ಯನಾದರೆ ನ್ಯಾಯಾಧಿಪತಿಯು ಅವನನ್ನು ನೆಲಕ್ಕೆ ಬೀಳಿಸಿ ಅವನ ದುಷ್ಟತ್ವದ ಪ್ರಕಾರ ಅವನಿಗೆ ಲೆಕ್ಕದಿಂದ ಹೊಡಿಸಬೇಕು.
3. ನಾಲ್ವತ್ತು ಏಟು ಅವನಿಗೆ ಹೊಡಿಸಬಹುದು, ಹೆಚ್ಚಲ್ಲ ಇದಕ್ಕಿಂತ ಹೆಚ್ಚು. ಅವನಿಗೆ ಬಹಳ ಏಟುಗಳನ್ನು ಹೊಡೆದರೆ ನಿನ್ನ ಸಹೋದರನು ನಿನ್ನ ಕಣ್ಣುಗಳಿಗೆ ನೀಚನೆಂದು ಕಾಣಿಸಾನು.
4. ಕಣತುಳಿಯುವಾಗ ಎತ್ತಿನ ಬಾಯಿ ಕಟ್ಟಬಾರದು.
5. ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು.
6. ಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು.
7. ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು.
8. ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ
9. ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು.
10. ಆ ಮೇಲೆ ಅವನಿಗೆ ಇಸ್ರಾಯೇಲಿನಲ್ಲಿ ಕೆರಬಿಡಿಸಿಕೊಂಡವನ ಮನೆ ಎಂದು ಹೆಸರಾಗಬೇಕು ಎಂದು ಹೇಳಬೇಕು.
11. ಇಬ್ಬರು ಮನುಷ್ಯರು ಒಬ್ಬನ ಸಂಗಡ ಒಬ್ಬನು ಹೋರಾಡುವಾಗ ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವದಕ್ಕೆ ಸವಿಾಪ ಬಂದು ಕೈಚಾಚಿ ಅವನ ಮಾನಸ್ಥಾನವನ್ನು ಹಿಡಿದರೆ
12. ಅವಳ ಕೈಯನ್ನು ಕಡಿದುಹಾಕಬೇಕು; ನಿನ್ನ ಕಣ್ಣು ಕರುಣಿಸಬಾರದು.
13. ನಿನ್ನ ಚೀಲದಲ್ಲಿ ದೊಡ್ಡದು ಒಂದು, ಸಣ್ಣದು ಒಂದು ಹೀಗೆ ವಿವಿಧ ತೂಕಗಳು ನಿನಗಿರಬಾರದು.
14. ನಿನ್ನ ಮನೆಯಲ್ಲಿ ದೊಡ್ಡದು ಒಂದು, ಸಣ್ಣದು ಒಂದು ವಿವಿಧವಾದ ಅಳತೆಗಳು ನಿನಗಿರಬಾರದು.
15. ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.
16. ಅಂಥವು ಗಳನ್ನು ಮಾಡುವವರೆಲ್ಲರೂ ಅನ್ಯಾಯಮಾಡುವವ ರೆಲ್ಲರೂ ನಿನ್ನ ದೇವರಾದ ಕರ್ತನಿಗೆ ಅಸಹ್ಯ.
17. ನೀವು ಐಗುಪ್ತವನ್ನು ಬಿಟ್ಟು ಬರುವ ಮಾರ್ಗ ನದಲ್ಲಿ ಅಮಾಲೇಕ್ಯನು ನಿನಗೆ ಮಾಡಿದ್ದನ್ನು ಜ್ಞಾಪಕ ಮಾಡಿಕೊ.
18. ಅವನು ಮಾರ್ಗದಲ್ಲಿ ನಿನಗೆ ಎದುರು ಗೊಂಡು ದೇವರಿಗೆ ಭಯಪಡದೆ ನೀನು ಆಯಾಸವುಳ್ಳ ವನೂ ದಣಿದವನೂ ಆಗಿರುವ ಸಮಯದಲ್ಲಿ ನಿನ್ನ ಹಿಂದೆ ಬಿದ್ದ ಬಲಹೀನರೆಲ್ಲರನ್ನು ನಿನ್ನ ಹಿಂಭಾಗದಲ್ಲಿ ಸಂಹಾರಮಾಡಿದನು.
19. ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.

Chapter 26

1. ಇದಲ್ಲದೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ
2. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು.
3. ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ--ಕರ್ತನು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ನಾನು ಸೇರಿದ್ದೇನೆಂದು ಈಹೊತ್ತು ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡುತ್ತೇನೆ ಎಂದು ಹೇಳಬೇಕು.
4. ಆಗ ಯಾಜಕನು ಪುಟ್ಟಿಯನ್ನು ನಿನ್ನ ಕೈಯಿಂದ ತೆಗೆದು ನಿನ್ನ ದೇವರಾದ ಕರ್ತನ ಬಲಿಪೀಠದ ಮುಂದೆ ಇಡಬೇಕು.
5. ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.
6. ಆದರೆ ಐಗುಪ್ತ್ಯರು ನಮಗೆ ಕೇಡನ್ನುಮಾಡಿ ನಮ್ಮನ್ನು ಕುಂದಿಸಿ ಕಠಿಣವಾದ ಸೇವೆಯನ್ನು ನಮ್ಮ ಮೇಲೆ ಹೊರಿಸಿದರು.
7. ಆಗ ನಾವು ನಮ್ಮ ಪಿತೃಗಳ ದೇವರಾದ ಕರ್ತನಿಗೆ ಮೊರೆ ಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ ನಮ್ಮ ಸಂಕಟವನ್ನೂ ಕಷ್ಟವನ್ನೂ ಬಾಧೆಯನ್ನೂ ನೋಡಿದನು.
8. ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ
9. ನಮ್ಮನ್ನು ಈ ಸ್ಥಳಕ್ಕೆ ಕರಕೊಂಡು ಬಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿ ದ್ದಾನೆ.
10. ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು.
11. ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.
12. ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.
13. ಆಗ ನೀನು ನಿನ್ನ ದೇವರಾದ ಕರ್ತನ ಮುಂದೆ--ನಾನು ಪರಿಶುದ್ಧವಾದವುಗಳನ್ನು ನನ್ನ ಮನೆಯೊಳಗಿಂದ ತಕ್ಕೊಂಡು ನೀನು ನನಗೆ ಆಜ್ಞಾಪಿಸಿದ ಎಲ್ಲಾ ಆಜ್ಞೆಗಳ ಹಾಗೆಯೇ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಟ್ಟಿ ದ್ದೇನೆ; ನಿನ್ನ ಆಜ್ಞೆಗಳನ್ನು ವಿಾರಲಿಲ್ಲ, ಮರೆಯಲಿಲ್ಲ.
14. ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.
15. ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.
16. ಈ ನಿಯಮ ನ್ಯಾಯಗಳನ್ನು ಮಾಡಬೇಕೆಂದು ನಿನ್ನ ದೇವರಾದ ಕರ್ತನು ಈಹೊತ್ತು ನಿನಗೆ ಆಜ್ಞಾಪಿಸು ತ್ತಾನೆ; ಆದದರಿಂದ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಕಾಪಾಡಿ ಕೈಕೊಳ್ಳ ಬೇಕು.
17. ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ.
18. ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂ
19. ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.

Chapter 27

1. ಇದಲ್ಲದೆ ಮೋಶೆ ಇಸ್ರಾಯೇಲಿನ ಹಿರಿಯರ ಸಂಗಡ ಜನರಿಗೆ--ನಾನು ನಿಮಗೆ ಈ ಹೊತ್ತು ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಕಾಪಾ ಡಬೇಕು.
2. ನೀವು ಯೊರ್ದನನ್ನು ದಾಟಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ಬರುವ ದಿವಸದಲ್ಲಿ ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಿ
3. ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು.
4. ಆದದರಿಂದ ನೀವು ಯೊರ್ದನನ್ನು ದಾಟಿದ ಮೇಲೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್‌ ಬೆಟ್ಟದಲ್ಲಿ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.
5. ಅಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಬೇಕು ಅಂದರೆ ಕಲ್ಲಿನ ಬಲಿಪೀಠವನ್ನು ಕಟ್ಟಬೇಕು. ಆ ಕಲ್ಲುಗಳಿಗೆ ಕಬ್ಬಿಣದ ಆಯುಧ ತಗಲಿಸಬಾರದು.
6. ನಿನ್ನ ದೇವರಾದ ಕರ್ತನ ಬಲಿಪೀಠವನ್ನು ಹುಟ್ಟು ಕಲ್ಲುಗಳಿಂದ ಕಟ್ಟಬೇಕು; ಅದರ ಮೇಲೆ ನಿನ್ನ ದೇವ ರಾದ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಬೇಕು.
7. ಸಮಾಧಾನದ ಬಲಿಗಳನ್ನು ಅರ್ಪಿಸಿ ಅಲ್ಲಿ ತಿಂದು ನಿನ್ನ ದೇವರಾದ ಕರ್ತನ ಮುಂದೆ ಸಂತೋಷಪಡಬೇಕು.
8. ಇದಲ್ಲದೆ ಆ ಕಲ್ಲುಗಳಲ್ಲಿ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬಹಳ ಸರಳವಾಗಿ ಬರೆಯಬೇಕು.
9. ಆಗ ಮೋಶೆಯೂ ಲೇವಿಯರಾದ ಯಾಜಕರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ--ಓ ಇಸ್ರಾಯೇಲೇ, ಎಚ್ಚರಿಕೆ ತಕ್ಕೊಂಡು ಕೇಳು, ಈಹೊತ್ತು ನಿನ್ನ ದೇವರಾದ ಕರ್ತನಿಗೆ ನೀನು ಜನಾಂಗವಾಗಿದ್ದೀ.
10. ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಮಾತಿಗೆ ವಿಧೇಯರಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆಗಳನ್ನೂ ನಿಯಮಗಳನ್ನೂ ಕೈಕೊಳ್ಳಬೇಕು ಎಂದು ಹೇಳಿದನು.
11. ಇದಲ್ಲದೆ ಮೋಶೆ ಅದೇ ದಿವಸದಲ್ಲಿ ಜನ ರಿಗೆ--
12. ನೀವು ಯೊರ್ದನನ್ನು ದಾಟಿದ ಮೇಲೆ ಜನ ರನ್ನು ಆಶೀರ್ವದಿಸುವದಕ್ಕೆ ಗೆರಿಜ್ಜೀಮ್‌ ಬೆಟ್ಟದಲ್ಲಿ ನಿಲ್ಲತಕ್ಕವರಾರಂದರೆ -- ಸಿಮೆಯೋನ್‌, ಲೇವಿ, ಯೆಹೂದ, ಇಸ್ಸಾಕಾರ್‌, ಯೋಸೇಫ್‌, ಬೆನ್ಯಾವಿಾನ್‌.
13. ಶಪಿಸುವದಕ್ಕೆ ಏಬಾಲ್‌ ಬೆಟ್ಟದಲ್ಲಿ ನಿಲ್ಲತಕ್ಕವರ್ಯಾ ರೆಂದರೆ; ರೂಬೇನ್‌, ಗಾದ್‌, ಆಶೇರ್‌, ಜೆಬುಲೂನ್‌, ದಾನ್‌, ನಫ್ತಾಲಿ ಎಂದು ಆಜ್ಞಾಪಿಸಿ ಹೇಳಿದನು.
14. ಆಗ ಲೇವಿಯರು ಉತ್ತರ ಕೊಟ್ಟು ಇಸ್ರಾಯೇಲ್‌ ಜನರೆಲ್ಲರಿಗೆ ದೊಡ್ಡ ಶಬ್ದದಿಂದ--
15. ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್‌ ಎಂದು ಹೇಳಲಿ.
16. ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
17. ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
18. ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
19. ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
20. ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
21. ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
22. ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
23. ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
24. ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
25. ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
26. ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ ಎಂದು ಹೇಳಬೇಕು.

Chapter 28

1. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.
2. ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
3. ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ,
4. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.
5. ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ.
6. ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ.
7. ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು.
8. ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.
9. ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು.
10. ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು;
11. ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.
12. ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
13. ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ.
14. ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.
15. ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
16. ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ;
17. ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ.
18. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ.
19. ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ.
20. ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು.
21. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು.
22. ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
23. ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು.
24. ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು.
25. ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
26. ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.
27. ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು.
28. ಕರ್ತನು ನಿನ್ನನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಹೊಡೆಯುವನು.
29. ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.
30. ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
31. ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ.
32. ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
33. ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
34. ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ.
35. ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು.
36. ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
37. ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.
38. ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.
39. ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು.
40. ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು.
41. ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು.
42. ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು.
43. ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ.
44. ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ.
45. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು.
46. ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು.
47. ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ
48. ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
49. ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
50. ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.
51. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
52. ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
53. ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.
54. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು.
55. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ.
56. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ
57. ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.
58. ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ
59. ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.
60. ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು.
61. ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು.
62. ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
63. ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
64. ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
65. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
66. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ.
67. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.
68. ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.

Chapter 29

1. ಹೋರೇಬಿನಲ್ಲಿ ಅವರ ಸಂಗಡ ಮಾಡಿದ ಒಡಂಬಡಿಕೆಯ ಹೊರತಾಗಿ ಇಸ್ರಾ ಯೇಲ್‌ ಮಕ್ಕಳ ಸಂಗಡ ಮಾಡಬೇಕೆಂದು ಕರ್ತನು ಮೋಶೆಗೆ ಮೋವಾಬಿನ ದೇಶದಲ್ಲಿ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ;
2. ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಗಳ ಮುಂದೆ ಫರೋಹನಿಗೂ ಅವನ ಎಲ್ಲಾ ಸೇವಕ ರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ.
3. ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಗುರುತುಗಳನ್ನೂ ಅದ್ಭುತಗಳನ್ನೂ ನಿನ್ನ ಕಣ್ಣುಗಳು ನೋಡಿದವಲ್ಲಾ?
4. ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.
5. ನಾನು ನಾಲ್ವತ್ತು ವರುಷ ನಿಮ್ಮನ್ನು ಅರಣ್ಯದಲ್ಲಿ ನಡಿಸಿದೆನು; ನಿಮ್ಮ ಮೇಲಿರುವ ವಸ್ತ್ರ ಗಳು ಹಳೇವಾಗಲಿಲ್ಲ; ನಿಮ್ಮ ಪಾದಗಳಲ್ಲಿರುವ ಕೆರಗಳು ಹಳೇವಾಗಲಿಲ್ಲ.
6. ನಾನೇ ನಿಮ್ಮ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವ ಹಾಗೆ ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸ ಇಲ್ಲವೆ ಮದ್ಯಗಳನ್ನು ಕುಡಿಯಲಿಲ್ಲ.
7. ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು
8. ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು.
9. ಹೀಗಿರುವ ದರಿಂದ ನೀವು ಮಾಡುವದೆಲ್ಲಾದರಲ್ಲಿ ಸಫಲವಾಗುವ ಹಾಗೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.
10. ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ;
11. ನಿನ್ನ ದೇವರಾದ ಕರ್ತನು ಈಹೊತ್ತು ನಿನ್ನ ಸಂಗಡ ಮಾಡುವ ಒಡಂಬಡಿಕೆಯ ಲ್ಲಿಯೂ ಆಣೆಯಲ್ಲಿಯೂ ಸೇರುವದಕ್ಕೆ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಮನುಷ್ಯರೆಲ್ಲರೂ
12. ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.
13. ಆ ಒಡಂಬಡಿಕೆ ಯಾವದಂದರೆ, ಆತನು ನಿನಗೆ ಹೇಳಿದಂತೆಯೂ ನಿನ್ನ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದಂತೆಯೂ ಈಹೊತ್ತು ನಿನ್ನನ್ನು ತನಗೆ ಜನಾಂಗವಾಗಿ ಸ್ಥಾಪಿಸಿ ನಿನಗೆ ದೇವರಾಗ ಬೇಕೆಂಬದೇ.
14. ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆ ಯನ್ನೂ ಈ ಆಣೆಯನ್ನೂ ನಾನು ಮಾಡುವದಿಲ್ಲ;
15. ಈಹೊತ್ತು ಇಲ್ಲಿ ನಮ್ಮ ಸಂಗಡ ನಮ್ಮ ದೇವರಾದ ಕರ್ತನ ಮುಂದೆ ನಿಂತವನ ಸಂಗಡವೂ ಈಹೊತ್ತು ಇಲ್ಲಿ ನಮ್ಮ ಸಂಗಡ ಇರದವನ ಸಂಗಡವೂ ಮಾಡು ತ್ತೇನೆ.
16. ಯಾಕಂದರೆ ನಾವು ಐಗುಪ್ತದೇಶದಲ್ಲಿ ಹೇಗೆ ವಾಸವಾಗಿದ್ದೇವೆಂದೂ ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿಬಂದೆವೆಂದೂ ನಿಮಗೆ ತಿಳಿಯಿತಲ್ಲಾ?
17. ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದವು ಗಳನ್ನೂ ಬೊಂಬೆಗಳನ್ನೂ ನೀವು ನೋಡಿದಿರಲ್ಲಾ?
18. ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
19. ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
20. ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
21. ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.
22. ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ
23. ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್‌ ಗೊಮೋರ ಅದ್ಮಾಚೆಬೋ ಯಾಮ್‌ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
24. ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.
25. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
26. ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ
27. ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು.
28. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.
29. ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.

Chapter 30

1. ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ
2. ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ
3. ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
4. ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು.
5. ಇದಲ್ಲದೆ ನಿನ್ನ ಪಿತೃಗಳು ಸ್ವಾಧೀನಮಾಡಿಕೊಂಡ ದೇಶಕ್ಕೆ ನಿನ್ನ ದೇವರಾದ ಕರ್ತನು ನಿನ್ನನ್ನು ತರುವನು; ನೀನು ಅದನ್ನು ಸ್ವಾಧೀನಮಾಡಿಕೊಳ್ಳುವಿ; ಆತನು ನಿನಗೆ ಒಳ್ಳೇದನ್ನು ಮಾಡಿ ನಿನ್ನ ಪಿತೃಗಳಿಗಿಂತಲೂ ನಿನ್ನನ್ನು ಹೆಚ್ಚಿಸುವನು.
6. ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
7. ಇದಲ್ಲದೆ ನಿನ್ನ ದೇವರಾದ ಕರ್ತನು ಆ ಶಾಪಗಳನ್ನೆಲ್ಲಾ ನಿನ್ನ ಶತ್ರುಗಳ ಮೇಲೆಯೂ ನಿನ್ನನ್ನು ಹಿಂಸಿಸಿದ ನಿನ್ನ ಹಗೆಯವರ ಮೇಲೆಯೂ ಹಾಕುವನು.
8. ಆದರೆ ನೀನು ತಿರುಗಿ ಕೊಂಡು ಕರ್ತನ ಮಾತನ್ನು ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಳ್ಳುವಿ.
9. ಇದಲ್ಲದೆ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈಕೆಲಸದಲ್ಲಿ, ಗರ್ಭದ ಫಲದಲ್ಲಿ, ಪಶುಗಳ ಫಲದಲ್ಲಿ, ಭೂಮಿಯ ಫಲದಲ್ಲಿ ಒಳ್ಳೇದಕ್ಕೋಸ್ಕರ ಅಭಿವೃದ್ಧಿ ಮಾಡುವನು.
10. ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳಿ ಈ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಆತನ ಆಜ್ಞೆ ನಿಯಮಗಳನ್ನು ಕಾಪಾಡಿ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿ ಕೊಂಡರೆ ಕರ್ತನು ನಿನ್ನ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿನ್ನಲ್ಲಿ ಒಳ್ಳೇದಕ್ಕೋಸ್ಕರ ಸಂತೋಷಿಸುವನು.
11. ನಿಶ್ಚಯವಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯು ನಿನಗೆ ಮರೆಯಾದದ್ದಲ್ಲ, ಇಲ್ಲವೆ ದೂರವಾದದ್ದಲ್ಲ.
12. ನಾವು ಅದನ್ನು ಮಾಡು ವಂತೆ--ಯಾರು ನಮಗೋಸ್ಕರ ಆಕಾಶಕ್ಕೆ ಏರಿಹೋಗಿ ಅದನ್ನು ತಕ್ಕೊಂಡು ತಿಳಿಸುವರು, ಎಂಬುವ ಹಾಗೆ ಅದು ಆಕಾಶದಲ್ಲಿ ಇರುವಂಥದ್ದಲ್ಲ.
13. ನಾವು ಅದನ್ನು ಮಾಡುವಂತೆ ಯಾರು ನಮಗೋಸ್ಕರ ಸಮುದ್ರವನ್ನು ದಾಟಿ ತಕ್ಕೊಂಡು ತಿಳಿಸುವರು? ಯಾರು ಹೋಗುವರು ಎಂಬುವ ಹಾಗೆ ಅದು ಸಮುದ್ರದ ಆಚೆಯಲ್ಲಿ ಇರುವಂಥದ್ದಲ್ಲ.
14. ಈ ವಾಕ್ಯವು ನಿನಗೆ ಬಹಳ ಸವಿಾಪವಾಗಿದೆ; ಅದನ್ನು ಕೈಕೊಳ್ಳುವ ಹಾಗೆ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಅದೆ.
15. ನೋಡು, ನಾನು ಈಹೊತ್ತು ಜೀವವನ್ನೂ ಮರಣವನ್ನೂ, ಒಳ್ಳೇದನ್ನೂ ಕೆಟ್ಟದ್ದನ್ನೂ ನಿನ್ನ ಮುಂದೆ ಇಟ್ಟಿದ್ದೇನೆ.
16. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನ ಆಜ್ಞೆ, ನಿಯಮ, ನ್ಯಾಯಗಳನ್ನು ಕಾಪಾಡಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ; ಹಾಗೆ ಮಾಡಿದರೆ ನೀನು ಬದುಕಿ ಹೆಚ್ಚುವಿ; ನೀನು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
17. ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ
18. ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ.
19. ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
20. ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.

Chapter 31

1. ಆಗ ಮೋಶೆ ಹೋಗಿ ಇಸ್ರಾಯೇಲ್ಯರಿಗೆಲ್ಲಾ ಈ ಮಾತುಗಳನ್ನು ಹೇಳಿದನು.
2. ಅವನು ಅವರಿಗೆ--ನಾನು ಈಹೊತ್ತು ನೂರ ಇಪ್ಪತ್ತು ವರುಷದವನಾಗಿದ್ದೇನೆ; ನಾನು ಇನ್ನು ಹೊರಗೆ ಹೋಗುವದಕ್ಕೂ ಬರುವದಕ್ಕೂ ಶಕ್ತನಲ್ಲ; ಇದಲ್ಲದೆ ಕರ್ತನು ನನಗೆ--ನೀನು ಈ ಯೊರ್ದನನ್ನು ದಾಟುವದಿ ಲ್ಲವೆಂದು ಹೇಳಿದ್ದಾನೆ.
3. ನಿನ್ನ ದೇವರಾದ ಕರ್ತನು ತಾನೇ ನಿನ್ನ ಮುಂದೆ ಹೋಗುವನು. ಆತನು ಆ ಜನಾಂಗಗಳನ್ನು ನಿನ್ನ ಮುಂದೆ ನಾಶಮಾಡುವನು; ನೀನು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿ; ಕರ್ತನು ಹೇಳಿದ ಪ್ರಕಾರ ಯೆಹೋಶುವನು ನಿನ್ನ ಮುಂದೆ ಹೋಗುವನು.
4. ಕರ್ತನು ಅಮೋರಿಯರ ಅರಸನಾದ ಸೀಹೋನನಿಗೂ ಓಗನಿಗೂ ಆತನು ನಾಶಮಾಡಿದ ಅವರ ದೇಶಕ್ಕೂ ಮಾಡಿದಂತೆ ಆ ಜನಾಂಗಗಳಿಗೆ ಮಾಡುವನು.
5. ನಾನು ನಿಮಗೆ ಆಜ್ಞಾಪಿಸಿದ ಸಮಸ್ತ ಆಜ್ಞೆಯ ಪ್ರಕಾರ ನೀವು ಅವರಿಗೆ ಮಾಡುವಹಾಗೆ ಕರ್ತನು ಅವರನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವನು.
6. ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
7. ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.
8. ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
9. ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
10. ಮೋಶೆಯು ಅವರಿಗೆ--ಪ್ರತಿ ಏಳು ವರುಷಗಳ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರುಷದಲ್ಲಿ, ಅಂದರೆ ಗುಡಾರಗಳ ಹಬ್ಬದಲ್ಲಿ
11. ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.
12. ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.
13. ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವ ದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ನೀವು ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಕರ್ತನಿಗೆ ಭಯಪಡುವದಕ್ಕೆ ಕಲಿತುಕೊಳ್ಳಲಿ ಎಂದು ಆಜ್ಞಾಪಿಸಿ ಹೇಳಬೇಕು.
14. ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.
15. ಆಗ ಕರ್ತನು ಗುಡಾರದೊಳಗೆ ಮೇಘಸ್ತಂಭದಲ್ಲಿ ಕಾಣಿಸಿ ಕೊಂಡನು; ಆ ಮೇಘಸ್ತಂಭವು ಗುಡಾರದ ಬಾಗಲಿನ ಮೇಲೆ ನಿಂತಿತು.
16. ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
17. ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
18. ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.
19. ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್‌ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್‌ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು.
20. ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
21. ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು.
22. ಆದದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲ್‌ ಮಕ್ಕಳಿಗೆ ಕಲಿಸಿದನು.
23. ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್‌ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
24. ಇದಲ್ಲದೆ ಮೋಶೆ ಈ ನ್ಯಾಯಪ್ರಮಾಣದ ವಾಕ್ಯಗಳನ್ನು ಪುಸ್ತಕದಲ್ಲಿ ಬರೆದು ಮುಗಿಸಿದಾಗ
25. ಮೋಶೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ ಆಜ್ಞಾಪಿಸಿ--
26. ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.
27. ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
28. ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.
29. ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.
30. ಆಗ ಮೋಶೆ ಇಸ್ರಾಯೇಲ್‌ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.

Chapter 32

1. ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
2. ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
3. ಕರ್ತನ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ.
4. ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
5. ಅವರು ತಮ್ಮನ್ನು ತಾವೇ ಕೆಡಿಸಿಕೊಂಡರು. ಅವರ ಗುರುತು ಆತನ ಮಕ್ಕಳಲ್ಲದವರ ಗುರುತು. ಅವರು ಮೂರ್ಖರಾದ ವಕ್ರಸಂತತಿಯೇ.
6. ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.
7. ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊ; ತಲ ತಲಾಂತರಗಳ ವರುಷಗಳನ್ನು ಗ್ರಹಿಸಿಕೊ; ನಿನ್ನ ತಂದೆ ಯನ್ನು ಕೇಳು, ಅವನು ನಿನಗೆ ತಿಳಿಸುವನು. ನಿನ್ನ ಹಿರಿಯರನ್ನು ಕೇಳು, ಅವರು ನಿನಗೆ ಹೇಳುವರು.
8. ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್‌ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
9. ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
10. ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
11. ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ ಅವುಗಳ ಮೇಲೆ ರೆಕ್ಕೆಯನ್ನಾಡಿಸಿ ತನ್ನ ರೆಕ್ಕೆಗಳನ್ನು ಚಾಚಿ, ತಕ್ಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ
12. ಕರ್ತನು ಒಬ್ಬನೇ ಅವನನ್ನು ನಡಿಸಿದನು. ಅನ್ಯ ದೇವರು ಒಬ್ಬನೂ ಅವನ ಸಂಗಡ ಇದ್ದಿಲ್ಲ.
13. ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
14. ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
15. ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
16. ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
17. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
18. ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
19. ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
20. ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
21. ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
22. ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
23. ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.
24. ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
25. ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
26. ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
27. ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
28. ಅವರು ಆಲೋಚನೆಯಿಲ್ಲದ ಜನಾಂಗವೇ; ಅವರಲ್ಲಿ ಗ್ರಹಿಕೆ ಇಲ್ಲ.
29. ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
30. ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
31. ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
32. ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ.
33. ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ.
34. ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?
35. ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
36. ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
37. ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ,
38. ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ.
39. ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
40. ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.
41. ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
42. ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
43. ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
44. ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.
45. ಮೋಶೆಯು ಈ ಮಾತುಗಳನ್ನೆಲ್ಲಾ ಸಮಸ್ತ ಇಸ್ರಾಯೇಲಿಗೆ ಹೇಳಿ ತೀರಿಸಿದಾಗ ಅವರಿಗೆ--
46. ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
47. ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
48. ಅದೇ ದಿವಸದಲ್ಲಿ ಕರ್ತನು ಮೋಶೆಗೆ--
49. ಈ ಅಬಾರೀಮ್‌ ಪರ್ವತದ ಮೇಲೆ ಮೋವಾಬ್‌ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್‌ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್‌ ದೇಶವನ್ನು ನೋಡು,
50. ನಿನ್ನ ಸಹೋದರನಾದ ಆರೋನನು ಹೋರ್‌ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.
51. ಕಾರಣವೇನಂದರೆ, ನೀವು ಜಿನ್‌ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್‌ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.
52. ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.

Chapter 33

1. ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್‌ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
2. ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್‌ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
3. ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
4. ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು.
5. ಜನರ ಮುಖ್ಯಸ್ಥರೂ ಇಸ್ರಾಯೇಲಿನ ಗೋತ್ರ ಗಳೂ ಕೂಡಿಕೊಂಡಿದ್ದಾಗ ಆತನು ಯೆಶುರೂನಿನಲ್ಲಿ ಅರಸನಾಗಿದ್ದನು.
6. ರೂಬೇನನು ಸಾಯದೆ ಬದುಕಲಿ; ಅವನ ಜನ ಸ್ವಲ್ಪವಾಗದಿರಲಿ.
7. ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
8. ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್‌ ನಿನ್ನ ಊರೀಮ್‌ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
9. ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
10. ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
11. ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.
12. ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.
13. ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ
14. ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ
15. ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ
16. ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.
17. ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
18. ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು.
19. ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.
20. ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ.
21. ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.
22. ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು.
23. ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು.
24. ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ.
25. ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.
26. ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
27. ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
28. ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.
29. ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.

Chapter 34

1. ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ
2. ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯಾಮನ, ಮನಸ್ಸೆಯ ದೇಶವನ್ನೂ ಸಮುದ್ರದ ಕಟ್ಟಕಡೆಯ ವರೆಗಿರುವ ಸಮಸ್ತ ಯೆಹೂದ ದೇಶವನ್ನೂ
3. ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.
4. ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
5. ಕರ್ತನ ಮಾತಿನ ಹಾಗೆ ಕರ್ತನ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಸತ್ತನು.
6. ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ.
7. ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ.
8. ಇಸ್ರಾಯೇಲ್‌ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.
9. ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್‌ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.
10. ಆದರೆ ಐಗುಪ್ತದೇಶದಲ್ಲಿ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿ ದಕ್ಕೆ ಕರ್ತನು ಅವನನ್ನು ಕಳುಹಿಸಿದ ಸಮಸ್ತ ಗುರುತು ಗಳ ಮತ್ತು ಅದ್ಭುತಗಳ ವಿಷಯದಲ್ಲಿಯೂ
11. ಮೋಶೆ ಸಮಸ್ತ ಇಸ್ರಾಯೇಲಿನ ಮುಂದೆ ತೋರಿಸಿದ ಸಮಸ್ತ ಬಲವಾದ ಕೈಯ ಸಮಸ್ತ ಮಹಾಭಯದ ವಿಷಯ ದಲ್ಲಿಯೂ
12. ಕರ್ತನು ಮುಖಾಮುಖಿಯಾಗಿ ತಿಳಿದ ಮೋಶೆಯ ಹಾಗೆ ಮತ್ತೊಬ್ಬ ಪ್ರವಾದಿ ಇಸ್ರಾ ಯೇಲಿನಲ್ಲಿ ಏಳಲಿಲ್ಲ .


Free counters!   Site Meter(April28th2012)