Home Churches About
 

Chapter 1

1. ಪೆತೂವೇಲನ ಮಗನಾದ ಯೋವೇಲನಿಗೆ ಬಂದ ಕರ್ತನ ವಾಕ್ಯವು.
2. ವೃದ್ಧರೇ, ಕೇಳಿರಿ! ದೇಶನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ; ಇದು ನಿಮ್ಮ ದಿವಸಗಳಲ್ಲಾದರೂ ನಿಮ್ಮ ತಂದೆಗಳ ದಿವಸಗಳಲ್ಲಾದರೂ ಉಂಟಾಯಿತೋ?
3. ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ.
4. ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
5. ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.
6. ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು.
7. ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
8. ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು.
9. ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.
10. ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
11. ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು.
12. ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.
13. ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
14. ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
15. ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
16. ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ?
17. ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ.
18. ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.
19. ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ.
20. ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.

Chapter 2

1. ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ.
2. ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
3. ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್‌ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.
4. ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ.
5. ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ
6. ಅವರ ಮುಂದೆ ಜನರು ಬಹಳವಾಗಿ ನೊಂದುಕೊಳ್ಳುತ್ತಾರೆ. ಎಲ್ಲಾ ಮುಖಗಳು ಕಳೆಗುಂದುತ್ತವೆ.
7. ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ.
8. ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ.
9. ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ.
10. ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.
11. ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
12. ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
13. ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
14. ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
15. ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ.
16. ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.
17. ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
18. ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.
19. ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
20. ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.
21. ಓ ದೇಶವೇ, ಭಯಪಡಬೇಡ, ಉಲ್ಲಾಸಿಸಿ ಸಂತೋಷವಾಗಿರು; ಕರ್ತನು ಮಹತ್ತಾದವುಗಳನ್ನು ಮಾಡುತ್ತಾನೆ.
22. ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
23. ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
24. ಕಣಗಳು ಧಾನ್ಯದಿಂದ ತುಂಬುವವು; ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವವು.
25. ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
26. ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
27. ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
28. ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
29. ದಾಸರ ಮೇಲೆಯೂ ದಾಸಿಯರ ಮೇಲೆಯೂ ಆ ದಿವಸಗಳಲ್ಲಿ ನನ್ನ ಆತ್ಮವನ್ನು ಸುರಿಸುವೆನು.
30. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು.
31. ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.
32. ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್‌ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.

Chapter 3

1. ಇಗೋ, ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ ನಾನು ಯೆಹೂದದ ಮತ್ತು ಯೆರೂಸಲೇಮಿನ ಸೆರೆಯನ್ನು ತಿರುಗಿಸುವಾಗ
2. ಎಲ್ಲಾ ಜನಾಂಗಗಳನ್ನು ಕೂಡಿಸಿ ಯೆಹೋಷಾಫಾಟನ ತಗ್ಗಿಗೆ ಅವರನ್ನು ಇಳಿಸಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರ ಸಂಗಡ ವ್ಯಾಜ್ಯವಾಡುವೆನು; ಅವರು ಅವರನ್ನು ಜನಾಂಗಗಳಲ್ಲಿ ಚದರಿಸಿ ನನ್ನ ದೇಶವನ್ನು ಪಾಲಿಟ್ಟು
3. ನನ್ನ ಜನರಿ ಗೋಸ್ಕರ ಚೀಟು ಹಾಕಿ ಹುಡುಗನನ್ನು ಸೂಳೆಗಾಗಿ ಕೊಟ್ಟು, ಹುಡುಗಿಯನ್ನು ದ್ರಾಕ್ಷಾರಸಕ್ಕಾಗಿ ಮಾರಿ ಅವರು ಕುಡಿಯುವ ಹಾಗೆ ಮಾರಿದ್ದಾರಲ್ಲಾ?
4. ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
5. ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ ತೆಗೆದುಕೊಂಡು ನನ್ನ ಒಳ್ಳೇ ರಮ್ಯವಾದವುಗಳನ್ನು ನಿಮ್ಮ ದೇವಸ್ಥಾನಗಳಿಗೆ ತಕ್ಕೊಂಡು ಹೋಗಿದ್ದೀರಿ.
6. ಯೆಹೂದದ ಮಕ್ಕಳನ್ನೂ ಯೆರೂಸಲೇಮಿನ ಮಕ್ಕ ಳನ್ನೂ ತಮ್ಮ ಪ್ರಾಂತ್ಯಗಳಿಂದ ದೂರ ಮಾಡುವ ಹಾಗೆ ಗ್ರೀಕರಿಗೆ ಮಾರಿದ್ದೀರಿ.
7. ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
8. ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.
9. ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ.
10. ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ.
11. ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು.
12. ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
13. ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
14. ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.
15. ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು.
16. ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
17. ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
18. ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.
19. ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.
20. ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.
21. ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.


Free counters!   Site Meter(April28th2012)